Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಸ್ಸಂಜೆ ಗೆಳತಿ'ನಿರ್ಮಾಪಕ ಶ್ರೀನಿವಾಸ್ ಬಂಧನ
ಬೆಂಗಳೂರು ಸಿಸಿಬಿ ಪೊಲೀಸರು 'ಮುಸ್ಸಂಜೆ ಗೆಳತಿ' ಚಿತ್ರದ ನಿರ್ಮಾಪಕ ಬಿ ಪಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ. ಶಿಕ್ಷಣ ಸಂಸ್ಥೆಯೊಂದನ್ನು ನಡೆಸುತ್ತಿರುವ ಗೋವಾ ಮೂಲದ ಪ್ರಿನ್ಸಿಪಾಲ್ ಎನ್ ಕೆ ದಿವಾನ್ ಎಂಬುವವರು ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದರು. ತಮ್ಮ ಶಿಕ್ಷಣ ಸಂಸ್ಥೆಗೆ ಸಾಲ ಕೊಡಿಸುವುದಾಗಿ ಹೇಳಿದ್ದ ಶ್ರೀನಿವಾಸ್ ದೊಡ್ಡ ಮೊತ್ತದ ಮುಂಗಡ ಹಣವನ್ನು ದಿವಾನ್ ಅವರಿಂದ ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಶ್ರೀನಿವಾಸ್ ಮೇಲೆ ವಂಚನೆ ಆರೋಪ ಬಂದ ಹಿನ್ನ್ನೆಲೆಯಲ್ಲಿ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು.ಇದೀಗ ಮತ್ತೊಂದು ವಂಚನೆ ಆರೋಪದ ಹಿನ್ನೆಲೆಯಲ್ಲಿ ಮತ್ತ್ತೊಮ್ಮೆ ಶ್ರೀನಿವಾಸ್ ನನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಬಿ ಪಿ ಶ್ರೀನಿವಾಸ್ ನಿರ್ದೇಶಿಸಿ ಮುಖ್ಯಪಾತ್ರವನ್ನು ಪೋಷಿಸಿರುವ ಚಿತ್ರ 'ಮುಸ್ಸಂಜೆಯ ಗೆಳತಿ'.ಈ ಚಿತ್ರದಲ್ಲಿ ತಂದೆ ಮತ್ತು ಮಗಳು ಪ್ರೇಮಿಗಳಾಗಿ ನಟಿಸಿರುವುದು ಗೊತ್ತೇ ಇದೆ. ತಂದೆ ಮತ್ತು ಮಗಳು ಪ್ರೇಮಿಗಳಾಗಿ ಅಭಿನಯಿಸಿರುವುದು ಹಲವು ಸಂಘನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದು ಅನೈತಿಕ ಸಂಬಂಧಗಳನ್ನು ಪ್ರೇರೇಪಿಸುತ್ತದೆ ಎಂಬ ಕಾರಣಕ್ಕೆ ಈ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.