Don't Miss!
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರಕ್ಷಣ್ ಚಿತ್ರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ
ಅಮಿತಾಬ್ ಬಚ್ಚನ್, ಸೈಫ್ ಆಲಿ ಖಾನ್, ದೀಪಿಕಾ ಪಡುಕೋಣೆ ಮುಖ್ಯಭೂಮಿಯಲ್ಲಿರುವ 'ಆರಕ್ಷಣ್' ಚಿತ್ರ ಶುಕ್ರವಾರ (ಆ.12) ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಡುಗಡೆಯಾಗಿದೆ. ಈ ಚಿತ್ರವನ್ನು ನಿಷೇಧಿಸಬೇಕು ಎಂದು ಬೆಂಗಳೂರಿನಲ್ಲಿ ಸಮತಾ ಸೈನಿಕ ದಳ ಇಂದು ಪ್ರತಿಭಟಿಸಿತು.
ಕೆ ಆರ್ ಮಾರುಕಟ್ಟೆ ಬಳಿಯ ಅಪ್ಸರಾ ಚಿತ್ರಮಂದಿರದ ಬಳಿ ಸಮತಾ ಸೈನಿಕ ದಳದ ಕಾರ್ಯಕರ್ತರು ಚಿತ್ರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಈ ಚಿತ್ರವನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಚಿತ್ರದಲ್ಲಿ ಜಾತಿ ವ್ಯವಸ್ಥೆ ಹಾಗೂ ಮೀಸಲಾತಿ ಬಗ್ಗೆ ವಿವಾದಾತ್ಮಕ ಅಂಶಗಳಿವೆ. ಹಾಗಾಗಿ ಈ ಚಿತ್ರದ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಕಾರ್ಯಕರ್ತರು ಆಗ್ರಹಿಸಿದರು. ಆದರೆ ಚಿತ್ರದಲ್ಲಿ ಅಂತಹ ಗಂಭೀರವಾದ ಸನ್ನಿವೇಶಗಳು, ಸಂಭಾಷಣೆಗಳು ಇಲ್ಲ ಎನ್ನಲಾಗಿದೆ.
ಚಿತ್ರದ ಬಗ್ಗೆ ಇಲ್ಲಸಲ್ಲದಅಂತೆಕಂತೆಗಳನ್ನು ಸೃಷ್ಟಿಸಿ, ಪ್ರೇಕ್ಷಕರು ಚಿತ್ರಮಂದಿರಕ್ಕೆ.ಸೆಳೆಯುವ ಪ್ರಯತ್ನವಿದು. ವಿವಾದಾತ್ಮಕ ಚಿತ್ರ ಎಂದರೆ ಪ್ರೇಕ್ಷಕರು ಏನೋ ಇರಬಹುದು ಎಂದುಕೊಂಡು ಚಿತ್ರವನ್ನು ನೋಡಲು ಮುಗಿಬೀಳುತ್ತಾರೆ. ಬಾಲಿವುಡ್ನಲ್ಲಿ ಇತ್ತೀಚೆಗೆ ಇದೊಂದು ಪರಿಪಾಠವಾಗಿದೆ ಎಂಬ ಮಾತುಗಳು ಕೇಳಿಬಂದಿವೆ. (ದಟ್ಸ್ಕನ್ನಡ ಸಿನಿವಾರ್ತೆ)