Don't Miss!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನುವಾದಿ ಪ್ರಕಾಶ್ ಝಾ ಬಂಧಿಸಿ, ಆರಕ್ಷಣ್ ನಿಷೇಧಿಸಿ
ಶೋಷಿತವರ್ಗಗಳಿಗೆ ನೀಡಿರುವ ಮೀಸಲಾತಿ ಕುರಿತು ಅಪಹಾಸ್ಯ, ಅವಮಾನ ಮಾಡಿರುವ ಆರಕ್ಷಣ್ ಚಿತ್ರವನ್ನು ಈ ಕೂಡಲೇ ರಾಜ್ಯದಾದ್ಯ್ಂತ ನಿಷೇಧಿಸಬೇಕು. ಮನುವಾದಿಯಾದ ಚಿತ್ರ ನಿರ್ದೇಶಕ ಪ್ರಕಾಶ್ ಝಾರನ್ನು ತಕ್ಷಣವೇ ಬಂಧಿಸಿ ಶಿಕ್ಷಿಸಬೇಕು ಇಲ್ಲವೇ ಗಡಿಪಾರು ಮಾಡಬೇಕು ಎಂದು ಮಾದಿಗ ದಂಡೋರ ಸಂಘಟನೆಗಳು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದೆ.
ದಲಿತ ವಿದ್ಯಾರ್ಥಿಗಳು ವಿದ್ಯೆ ಕಲಿಯುವುದರ ಬದಲು ಶೂ ಸ್ವಚ್ಚಗೊಳಿಸುವುದು ಮೇಲು ಎಂದು'ಆರಕ್ಷಣ್" ಚಿತ್ರದಲ್ಲಿ ಬಿಂಬಿಸಿರುವುದನ್ನು ಸಂಘಟನೆಯ ಅಧ್ಯಕ್ಷ ಪಾವಗಡ ಶ್ರೀರಾಮ್ ಖಂಡಿಸಿದ್ದಾರೆ.
ಇಂಥ ಚಿತ್ರಗಳು ಸಮಾಜದ ಶಾಂತಿ ಕದಡುತ್ತದೆ. ಜನರು ವಿದ್ಯಾವಂತರಾದಂತೆ ಅಸ್ಪೃಶ್ಯತೆ ಕಡಿಮೆಯಾಗುತ್ತಿದ್ದು ಇಂತಹ ಸಂದರ್ಭದಲ್ಲಿ ಎಲ್ಲರ ಭಾವನೆಗೆ ಧಕ್ಕೆ ತರುವಂತಹ ವಿಚಾರಗಳನ್ನು ಒಳಗೊಂಡ ಸಿನೆಮಾವನ್ನು ಎಲ್ಲ ನಾಗರಿಕರು ವಿರೋಧಿಸಬೇಕು ಎಂದು ಶ್ರೀರಾಮ್ ಆಗ್ರಹಿಸಿದ್ದಾರೆ.
ರಾಜ್ಯದ ಚಿತ್ರಮಂದಿ ರಗಳಲ್ಲಿ ಆರಕ್ಷಣ್ ಚಿತ್ರ ಪ್ರದರ್ಶನ ರದ್ದು ಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ್ ತಿಳಿಸಿದ್ದಾರೆ.
ಚಿತ್ರದಲ್ಲಿ ಮೀಸಲಾತಿ ಕುರಿತಂತೆ ಇರುವ ವಿವಾದಿತ ಸಂಭಾಷಣೆಯನ್ನು ತೆಗೆಯುವಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷೆ ಪಿ.ಎಲ್. ಪುನಿಯಾ, ಸೆನ್ಸಾರ್ ಮಂಡಳಿಗೆ ಸೂಚಿಸಿದ್ದರೂ ನಿರ್ಲಕ್ಷ ತೋರಲಾಗಿದೆ. ಇದು ಸಾಲದೆಂಬಂತೆ ಮೂರ್ನಾಲ್ಕು ರಾಜ್ಯಗಳಲ್ಲಿ ಚಿತ್ರಕ್ಕೆ ನಿಷೇಧ ಹೇರಿರುವುದರ ವಿರುದ್ಧ ಝಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.