Just In
Don't Miss!
- News
ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಖಿ ಸಾವಂತ್ ನೆತ್ತಿ ಮೇಲೆ ಕಾನೂನು ತೂಗು ಕತ್ತಿ
ಡ್ರಾಮಾ ಕ್ವೀನ್ ರಾಖಿ ಸಾವಂತ್ ನೆತ್ತಿ ಮೇಲೆ ಕಾನೂನು ಕತ್ತಿ ತೂಗುತ್ತಿದೆ. ಯಾವ ಕ್ಷಣದಲ್ಲಾದರೂ ಆಕೆ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ. 'ರಾಖಿ ಕ ಇನ್ಸಾಫ್' ಎಂಬ ರಿಯಾಲಿಟಿ ಶೋನ ಸ್ಪರ್ಧಿ ಲಕ್ಷ್ಮಣ್ ಪ್ರಸಾದ್ (24)ಅವರನ್ನು ರಾಖಿ 'ನಾಮರ್ದ' ಎಂದು ಜರಿದಿದ್ದರು. ಮನನೊಂದ ಆ ಯುವಕ ಆತ್ಮಹತ್ಯೆಗೆ ಶರಣಾಗಿದ್ದ.
ಈ ಸಂಬಂಧ ಲಕ್ಷ್ಮಣ ಪ್ರಸಾದ್ ಸಂಬಂಧಿಕರು ರಾಖಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಝಾನ್ಸಿಯ ಪ್ರೇಮ್ ನಗರ್ ಪೊಲೀಸ್ ಠಾಣೆಯಲ್ಲಿ ರಾಖಿ ವಿರುದ್ಧ ದೂರನ್ನು ನೀಡಲಾಗಿದೆ. ರಾಖಿ ವಿರುದ್ಧ ಪೊಲೀಸರು ಏನು ಕ್ರಮ ಕೈಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ವೈವಾಹಿಕ ಸಮಸ್ಯೆಗಳಿಂದ ಕಂಗೆಟ್ಟಿದ್ದ ಲಕ್ಶ್ಮಣ್ ಪ್ರಸಾದ್ ಅಕ್ಟೋಬರ್ ತಿಂಗಳಲ್ಲಿ ತನ್ನ ಪತ್ನಿಯೊಂದಿಗೆ 'ರಾಖಿ ಕಾ ಇನ್ಸಾಫ್'(ರಾಖಿಯ ನ್ಯಾಯ) ಭಾಗವಹಿಸಿದ್ದ. ಈ ಕಾರ್ಯಕ್ರಮದಲ್ಲಿ ನೀನೊಬ್ಬ 'ನಾಮರ್ಧ', 'ನಪುಂಸಕ' ಎಂದು ಜರಿದಿದ್ದರು. ಈ ಕಾರ್ಯಕ್ರಮದಿಂದ ಪ್ರಭಾವಿತರಾದಲಕ್ಷ್ಮಣ್ ನೆರೆಹೊರೆಯವರು ಅವರನ್ನು ನಾಮರ್ಧ ಎಂದು ಹಂಗಿಸತೊಡಗಿದರು.
ಕಡೆಗೆ ಆತ ಮನನೊಂದು ನ.10ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ತಾಯಿ ಅಲವತ್ತುಕೊಂಡಿದ್ದಾರೆ. ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಬ್ರಿಜ್ ಲಾಲ್ ಅವರು ಮಾತನಾಡುತ್ತಾ, ರಾಖಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರೇರಣೆ) ಪ್ರಕಾರ ಕ್ರಮಕೈಗೊಳ್ಳುತ್ತೇವೆ. ಹಾಗೆಯೇ ಸೆಕ್ಷನ್ 504 (ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಆತನ ಮನಃಶಾಂತಿಗೆ ಭಂಗ ತಂದಿದ್ದಕ್ಕೆ) ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.