Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಅಂದರ್ ಬಾಹರ್ ಚುಟ್ಟ ಸೀನ್ಗೆ ಆಕ್ಷೇಪ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಲೇಟೆಸ್ಟ್ ಚಿತ್ರ 'ಅಂದರ್ ಬಾಹರ್'. ಈ ಚಿತ್ರದಲ್ಲಿ ಶಿವಣ್ಣ ಚುಟ್ಟ ಸೇದುವ ದೃಶ್ಯವಿದೆ ಎಂಬ ಕಾರಣಕ್ಕೆ ಭಾರಿ ಚರ್ಚೆಗೆ ಕಾರಣವಾಗಿದೆ. ನಾಯಕ ನಟನ ಸ್ಟೈಲ್ ಹಲವರ ಅನುಕರಣೆಗೂ ಕಾರಣವಾಗಬಹುದು ಎಂಬ ಆತಂಕವೇ ಇದಕ್ಕೆ ಕಾರಣ.
ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ 'ಅಂದರ್ ಬಾಹರ್' ಚಿತ್ರ ಸೆಟ್ಟೇರಿತು. ಹೊಗೆಯಾಡುತ್ತಿರುವ ಚುಟ್ಟ ಹಿಡಿದ ಶಿವಣ್ಣನ ಪೋಸ್ಟರ್ಗಳು ಹಲವರ ಕಣ್ಣು ಕುಕ್ಕಿದವು. ಇದು ತಪ್ಪಲ್ಲವೆ ಎಂದು ಚಿತ್ರತಂಡವನ್ನು ಪ್ರಶ್ನಿಸಿದರು. ಇದಕ್ಕೆ ಚಿತ್ರತಂಡ ಚುಟ್ಟ ಆತಂಕವನ್ನು ಕೊಂಚ ಮಟ್ಟಿಗೆ ನಿವಾರಿಸುವ ಪ್ರಯತ್ನ ಮಾಡಿತು.
ಅದೇನೆಂದರೆ, ಇದು ಕೇವಲ ಫೋಟೋ ಶೂಟ್ಗಾಗಿ ತೆಗೆದ ದೃಶ್ಯಗಳು. ಆದರೆ ಚಿತ್ರದಲ್ಲಿ ಈ ರೀತಿಯ ದೃಶ್ಯಗಳಿರುವುದಿಲ್ಲ ಎಂದಿದ್ದಾರೆ ಶಿವಣ್ಣ. ಈ ರೀತಿಯ ದೃಶ್ಯಗಳನ್ನು ಸೆನ್ಸಾರ್ ಮಂಡಳಿ ಬೆಂಬಲಿಸುವುದಿಲ್ಲ ಎಂಬ ಮಾತುಗಳನ್ನು ಅರುಂಧತಿ ನಾಗ್ ವ್ಯಕ್ತಪಡಿಸಿದ್ದಾರೆ.
ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕಿ ಪಾರ್ವತಿ, ನಟ ಶಶಿಕುಮಾರ್, ಹಿರಿಯ ಕಲಾವಿದೆ ಅರುಂಧತಿ ನಾಗ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು. ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. (ಏಜೆನ್ಸೀಸ್)