Don't Miss!
- Technology ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
- News ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಕಾರಣವೇನು?
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಅಂದರ್ ಬಾಹರ್ ಚುಟ್ಟ ಸೀನ್ಗೆ ಆಕ್ಷೇಪ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಲೇಟೆಸ್ಟ್ ಚಿತ್ರ 'ಅಂದರ್ ಬಾಹರ್'. ಈ ಚಿತ್ರದಲ್ಲಿ ಶಿವಣ್ಣ ಚುಟ್ಟ ಸೇದುವ ದೃಶ್ಯವಿದೆ ಎಂಬ ಕಾರಣಕ್ಕೆ ಭಾರಿ ಚರ್ಚೆಗೆ ಕಾರಣವಾಗಿದೆ. ನಾಯಕ ನಟನ ಸ್ಟೈಲ್ ಹಲವರ ಅನುಕರಣೆಗೂ ಕಾರಣವಾಗಬಹುದು ಎಂಬ ಆತಂಕವೇ ಇದಕ್ಕೆ ಕಾರಣ.
ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ 'ಅಂದರ್ ಬಾಹರ್' ಚಿತ್ರ ಸೆಟ್ಟೇರಿತು. ಹೊಗೆಯಾಡುತ್ತಿರುವ ಚುಟ್ಟ ಹಿಡಿದ ಶಿವಣ್ಣನ ಪೋಸ್ಟರ್ಗಳು ಹಲವರ ಕಣ್ಣು ಕುಕ್ಕಿದವು. ಇದು ತಪ್ಪಲ್ಲವೆ ಎಂದು ಚಿತ್ರತಂಡವನ್ನು ಪ್ರಶ್ನಿಸಿದರು. ಇದಕ್ಕೆ ಚಿತ್ರತಂಡ ಚುಟ್ಟ ಆತಂಕವನ್ನು ಕೊಂಚ ಮಟ್ಟಿಗೆ ನಿವಾರಿಸುವ ಪ್ರಯತ್ನ ಮಾಡಿತು.
ಅದೇನೆಂದರೆ, ಇದು ಕೇವಲ ಫೋಟೋ ಶೂಟ್ಗಾಗಿ ತೆಗೆದ ದೃಶ್ಯಗಳು. ಆದರೆ ಚಿತ್ರದಲ್ಲಿ ಈ ರೀತಿಯ ದೃಶ್ಯಗಳಿರುವುದಿಲ್ಲ ಎಂದಿದ್ದಾರೆ ಶಿವಣ್ಣ. ಈ ರೀತಿಯ ದೃಶ್ಯಗಳನ್ನು ಸೆನ್ಸಾರ್ ಮಂಡಳಿ ಬೆಂಬಲಿಸುವುದಿಲ್ಲ ಎಂಬ ಮಾತುಗಳನ್ನು ಅರುಂಧತಿ ನಾಗ್ ವ್ಯಕ್ತಪಡಿಸಿದ್ದಾರೆ.
ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕಿ ಪಾರ್ವತಿ, ನಟ ಶಶಿಕುಮಾರ್, ಹಿರಿಯ ಕಲಾವಿದೆ ಅರುಂಧತಿ ನಾಗ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು. ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. (ಏಜೆನ್ಸೀಸ್)