Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಅಂದರ್ ಬಾಹರ್ ಚುಟ್ಟ ಸೀನ್ಗೆ ಆಕ್ಷೇಪ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಲೇಟೆಸ್ಟ್ ಚಿತ್ರ 'ಅಂದರ್ ಬಾಹರ್'. ಈ ಚಿತ್ರದಲ್ಲಿ ಶಿವಣ್ಣ ಚುಟ್ಟ ಸೇದುವ ದೃಶ್ಯವಿದೆ ಎಂಬ ಕಾರಣಕ್ಕೆ ಭಾರಿ ಚರ್ಚೆಗೆ ಕಾರಣವಾಗಿದೆ. ನಾಯಕ ನಟನ ಸ್ಟೈಲ್ ಹಲವರ ಅನುಕರಣೆಗೂ ಕಾರಣವಾಗಬಹುದು ಎಂಬ ಆತಂಕವೇ ಇದಕ್ಕೆ ಕಾರಣ.
ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ 'ಅಂದರ್ ಬಾಹರ್' ಚಿತ್ರ ಸೆಟ್ಟೇರಿತು. ಹೊಗೆಯಾಡುತ್ತಿರುವ ಚುಟ್ಟ ಹಿಡಿದ ಶಿವಣ್ಣನ ಪೋಸ್ಟರ್ಗಳು ಹಲವರ ಕಣ್ಣು ಕುಕ್ಕಿದವು. ಇದು ತಪ್ಪಲ್ಲವೆ ಎಂದು ಚಿತ್ರತಂಡವನ್ನು ಪ್ರಶ್ನಿಸಿದರು. ಇದಕ್ಕೆ ಚಿತ್ರತಂಡ ಚುಟ್ಟ ಆತಂಕವನ್ನು ಕೊಂಚ ಮಟ್ಟಿಗೆ ನಿವಾರಿಸುವ ಪ್ರಯತ್ನ ಮಾಡಿತು.
ಅದೇನೆಂದರೆ, ಇದು ಕೇವಲ ಫೋಟೋ ಶೂಟ್ಗಾಗಿ ತೆಗೆದ ದೃಶ್ಯಗಳು. ಆದರೆ ಚಿತ್ರದಲ್ಲಿ ಈ ರೀತಿಯ ದೃಶ್ಯಗಳಿರುವುದಿಲ್ಲ ಎಂದಿದ್ದಾರೆ ಶಿವಣ್ಣ. ಈ ರೀತಿಯ ದೃಶ್ಯಗಳನ್ನು ಸೆನ್ಸಾರ್ ಮಂಡಳಿ ಬೆಂಬಲಿಸುವುದಿಲ್ಲ ಎಂಬ ಮಾತುಗಳನ್ನು ಅರುಂಧತಿ ನಾಗ್ ವ್ಯಕ್ತಪಡಿಸಿದ್ದಾರೆ.
ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕಿ ಪಾರ್ವತಿ, ನಟ ಶಶಿಕುಮಾರ್, ಹಿರಿಯ ಕಲಾವಿದೆ ಅರುಂಧತಿ ನಾಗ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು. ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. (ಏಜೆನ್ಸೀಸ್)