Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನ ಅಂದರ್ ಬಾಹರ್ ಚುಟ್ಟ ಸೀನ್ಗೆ ಆಕ್ಷೇಪ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಲೇಟೆಸ್ಟ್ ಚಿತ್ರ 'ಅಂದರ್ ಬಾಹರ್'. ಈ ಚಿತ್ರದಲ್ಲಿ ಶಿವಣ್ಣ ಚುಟ್ಟ ಸೇದುವ ದೃಶ್ಯವಿದೆ ಎಂಬ ಕಾರಣಕ್ಕೆ ಭಾರಿ ಚರ್ಚೆಗೆ ಕಾರಣವಾಗಿದೆ. ನಾಯಕ ನಟನ ಸ್ಟೈಲ್ ಹಲವರ ಅನುಕರಣೆಗೂ ಕಾರಣವಾಗಬಹುದು ಎಂಬ ಆತಂಕವೇ ಇದಕ್ಕೆ ಕಾರಣ.
ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ 'ಅಂದರ್ ಬಾಹರ್' ಚಿತ್ರ ಸೆಟ್ಟೇರಿತು. ಹೊಗೆಯಾಡುತ್ತಿರುವ ಚುಟ್ಟ ಹಿಡಿದ ಶಿವಣ್ಣನ ಪೋಸ್ಟರ್ಗಳು ಹಲವರ ಕಣ್ಣು ಕುಕ್ಕಿದವು. ಇದು ತಪ್ಪಲ್ಲವೆ ಎಂದು ಚಿತ್ರತಂಡವನ್ನು ಪ್ರಶ್ನಿಸಿದರು. ಇದಕ್ಕೆ ಚಿತ್ರತಂಡ ಚುಟ್ಟ ಆತಂಕವನ್ನು ಕೊಂಚ ಮಟ್ಟಿಗೆ ನಿವಾರಿಸುವ ಪ್ರಯತ್ನ ಮಾಡಿತು.
ಅದೇನೆಂದರೆ, ಇದು ಕೇವಲ ಫೋಟೋ ಶೂಟ್ಗಾಗಿ ತೆಗೆದ ದೃಶ್ಯಗಳು. ಆದರೆ ಚಿತ್ರದಲ್ಲಿ ಈ ರೀತಿಯ ದೃಶ್ಯಗಳಿರುವುದಿಲ್ಲ ಎಂದಿದ್ದಾರೆ ಶಿವಣ್ಣ. ಈ ರೀತಿಯ ದೃಶ್ಯಗಳನ್ನು ಸೆನ್ಸಾರ್ ಮಂಡಳಿ ಬೆಂಬಲಿಸುವುದಿಲ್ಲ ಎಂಬ ಮಾತುಗಳನ್ನು ಅರುಂಧತಿ ನಾಗ್ ವ್ಯಕ್ತಪಡಿಸಿದ್ದಾರೆ.
ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕಿ ಪಾರ್ವತಿ, ನಟ ಶಶಿಕುಮಾರ್, ಹಿರಿಯ ಕಲಾವಿದೆ ಅರುಂಧತಿ ನಾಗ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಚಿತ್ರರಂಗದ ಹಲವಾರು ಗಣ್ಯರು ಪಾಲ್ಗೊಂಡಿದ್ದರು. ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. (ಏಜೆನ್ಸೀಸ್)