Don't Miss!
- News Gadag: ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರಿಗೆ ರಾಜ ಮರ್ಯಾದೆ: ಮಾಜಿ ಸಿಎಂ
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿವೀರ, ಗಾಡ್ ಫಾದರ್ ನಡುವೆ ಮೆಗಾ ಫೈಟ್
'ಕಠಾವೀರ ಸುರಸುಂದರಾಂಗಿ' ಹಾಗೂ 'ಗಾಡ್ ಫಾದರ್' ಚಿತ್ರಗಳ ಬಿಡುಗಡೆ ವಿವಾದ ಬಿಗಡಾಯಿಸಿದೆ. ಇವೆರಡೂ ಚಿತ್ರಗಳ ನಿರ್ಮಾಪಕರು ತಾ ಮುಂದು ನಾ ಮುಂದು ಎಂದು ಬಿಡುಗಡೆಗೆ ಪಟ್ಟು ಹಿಡಿದಿದ್ದು ಸಮಸ್ಯೆ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.
ಶುಕ್ರವಾರ (ಏ.13) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. 'ಕಠಾರಿವೀರ' ಚಿತ್ರದ ನಿರ್ಮಾಪಕ ಮುನಿರತ್ನ ಹಾಗೂ 'ಗಾಡ್ ಫಾದರ್' ನಿರ್ಮಾಪಕ ಕೆ ಮಂಜು ಇಬ್ಬರೂ ತಮ್ಮ ಪಟ್ಟನ್ನು ಬಿಡದೆ ಸಭೆಯಿಂದ ವಾಕೌಟ್ ಮಾಡಿದರು.
ಇಂದು ಸಂಜೆ 4 ಗಂಟೆಗೆ ಮತ್ತೆ ಮಾತುಕತೆಗ ಆಹ್ವಾನಿಸಲಾಗಿದೆ. ಸಭೆಯಲ್ಲಿ ಯಾವ ಚಿತ್ರ ಮೊದಲು ಬಿಡುಗಡೆ ಮಾಡಬೇಕು, ಎಷ್ಟು ದಿನಗಳ ಅಂತರದಲ್ಲಿ ಬಿಡುಗಡೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಗುತ್ತದೆ. ಆದರೆ ಇಬ್ಬರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಏ.27ರಂದೇ ಬಿಡುಗಡೆ ಮಾಡಲು ಪಟ್ಟುಹಿಡಿದಿದ್ದಾರೆ.
ಮೊದಲು ಶೂಟಿಂಗ್ ಆರಂಭಿಸಿದ್ದು ನಾನು. ಹಾಗಾಗಿ ನನ್ನ ಚಿತ್ರ 'ಗಾಡ್ ಫಾದರ್' ಮೊದಲು ಬಿಡುಗಡೆಯಾಗಲಿ ಎಂಬುದು ಕೆ ಮಂಜು ವಾದ. ಈ ವಾದನ್ನು 'ಕಠಾರಿವೀರ' ಚಿತ್ರದ ನಿರ್ಮಾಪಕ ಮುನಿರತ್ನ ಸುತಾರಾಂ ಒಪ್ಪುತ್ತಿಲ್ಲ. ವಿಶೇಷ ಎಂದರೆ ಈ ಎರಡೂ ಚಿತ್ರಗಳಿಗೆ ಉಪೇಂದ್ರ ಅವರೇ ನಾಯಕ. (ಒನ್ಇಂಡಿಯಾ ಕನ್ನಡ)