Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಷ್ ಅವರೇ ನೀವು ಹೇಳೋದು ಸರೀನಾ?
ನಟ ದರ್ಶನ್ ಹೆಂಡತಿಗೆ ಹೊಡೆದ ಪ್ರಕರಣದ ಹಿನ್ನೆಲೆಯಲ್ಲಿ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹೆಂಡತಿಗೆ ಹೊಡೆಯುವುದು ಶೌರ್ಯವಲ್ಲ ಕ್ರೌರ್ಯ. ನಟ ಅಂಬರೀಷ್, ' ಗಂಡ ಹೆಂಡತಿಗೆ ಹೊಡೆಯುವುದು, ಮಗ ತಾಯಿಗೆ ಹೊಡೆಯುವುದು ಕುಟುಂಬದಲ್ಲಿ ಸರ್ವೇ ಸಾಮಾನ್ಯ' ಎಂದಿರುವುದು ಸರಿಯಲ್ಲ.
ಮಕ್ಕಳು ದಾರಿ ತಪ್ಪಿದಾಗ ತಂದೆ ತಾಯಿ ಗದರಿಸುತ್ತಾರೆ. ಅದಕ್ಕೂ ಸರಿಹೋಗದಿದ್ದರೆ ಅತ್ಯಂತ ವಿಷಾದದಿಂದ ಬಡಿಯುತ್ತಾರೆ. ಬಡಿದು, ಬಡಿದದ್ದಾಗಿ ವಿಷಾದದಿಂದ ಅಳುತ್ತಾರೆ. ಮಕ್ಕಳು ತಾಯಿಯನ್ನು ಬಡಿಯುವುದನ್ನು ಸಮರ್ಥಿಸುವುದಂತೂ ತೀರಾ ಅನ್ಯಾಯದ ವಿಷಯ. ಪ್ರೀತಿಯಿಂದ ಗೆಲ್ಲಲಾಗದವರು ಕ್ರೌರ್ಯಕ್ಕಿಳಿಯುತ್ತಾರೆ.
ಭಿನ್ನಮತವನ್ನು ಸಹಿಸುವ, ಚರ್ಚಿಸುವ ಮನೋಧರ್ಮ ಮನೆ ಮನೆಗಳಲ್ಲಿ ಬೆಳೆದು ಬರಬೇಕು. ಮನೆಗಳು ಪ್ರಜಾಪ್ರಭುತ್ವದ ತಾಣಗಳಾಗಬೇಕು. ಅಪ್ಪ ಅಳುವ ಪಕ್ಷಕ್ಕೆ ಸೇರಿದ್ದರೆ, ಅಮ್ಮ ಮಕ್ಕಳು ಕೇಳುವ ಪಕ್ಷಕ್ಕೆ ಸೇರಿರುತ್ತಾರೆ. ಅಪ್ಪನನ್ನು ಪ್ರಶ್ನಿಸದಿದ್ದರೆ ಆತ ಸರ್ವಾಧಿಕಾರಿಯಾಗುತ್ತಾನೆ.
ದೊಡ್ಡ ಕುಟುಂಬಗಳ ಜನ ಹೊಂದಾಣಿಕೆಯಿಂದ ಬದುಕುತ್ತಿದ್ದರು. ಗಂಡ, ಹೆಂಡತಿ ಮಕ್ಕಳ ಸಣ್ಣ ಕುಟುಂಬದ ಜನ ಗುದ್ದಾಡಿ ಹಾಳಾಗುತ್ತಿರುವುದು ಭೋಗಲಾಲಸೆಯಿಂದ. ದರ್ಶನ್ನ ತೆರೆಯ ಹಿಂದಿನ ಬದುಕು ಸರಿಯಾಗಬೇಕು. ದರ್ಶನ್ ಸಾರ್ವಜನಿಕವಾಗಿ ಪತ್ನಿಯ ಕ್ಷಮೆ ಕೋರುವುದು ಆತನ ಮನಸ್ಸಿನ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.