Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀರೇಶ್ ಚಿತ್ರಮಂದಿರದಿಂದ 'ಮೈಲಾರಿ' ಎತ್ತಂಗಡಿ
ಚಿತ್ರವೊಂದು ಯಶಸ್ವಿ ಪ್ರದರ್ಶನ ಕಾಣುತ್ತಿದ್ದಾಗಲೆ ಅದನ್ನು ಎತ್ತಂಗಡಿ ಮಾಡುವುದು ಗಾಂಧಿನಗರಕ್ಕೇನು ಹೊಸದಲ್ಲ. ಈಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ಮೈಲಾರಿ' ಚಿತ್ರಕ್ಕೂ ಇದೇ ಗತಿಯಾಗಿದೆ. 'ಮೈಲಾರಿ' ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ ವೀರೇಶ್ ಚಿತ್ರಮಂದಿರದಿಂದ ಎತ್ತಂಗಡಿ ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕರು ಗರಂ ಆಗಿದ್ದಾರೆ.
ರಮೇಶ್ ಯಾದವ್ ನಿರ್ಮಾಣದ 'ಬಾಸ್' ಚಿತ್ರ ಜನವರಿ 14ರಂದು ತೆರೆಗೆ ಅಪ್ಪಳಿದ್ದು, ಇದೇ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ 'ಮೈಲಾರಿ' ಚಿತ್ರಕ್ಕೆ ಕೊಕ್ ನೀಡಲಾಗಿದೆ. ಈ ಸಂಬಂಧ 'ಮೈಲಾರಿ' ನಿರ್ಮಾಪಕರು ವೀರೇಶ್ ಚಿತ್ರಮಂದಿರದ ಆಡಳಿತ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.
'ಮೈಲಾರಿ'ಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಶಿವಣ್ಣನ ಅಭಿಮಾನಿಗಳು ರೇಸ್ ಕೋರ್ಸ್ ರಸ್ತೆಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸಿದರು. ಪತ್ರಕರ್ತ ಅಗ್ನಿ ಶ್ರೀಧರ್ ಹಾಗೂ ನಿರ್ಮಾಪಕ ರವೀಂದ್ರಅವರು 'ಮೈಲಾರಿ' ಚಿತ್ರದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಅವರಿಗೆ ಸಾಥ್ ನೀಡಿದರು.
ಈ ಸಂಬಂಧ ಫಿಲಂ ಚೇಂಬರ್ ಏನು ಕ್ರಮಕೈಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ದರ್ಶನ್ ಮುಖ್ಯಭೂಮಿಕೆಯಲ್ಲಿರುವ 'ಬಾಸ್' ಚಿತ್ರಕ್ಕೆ ಬೆಳಗಿನ ಪ್ರದರ್ಶನ ಹಾಗೂ 'ಮೈಲಾರಿ'ಗೆ ಉಳಿದ ಪ್ರದರ್ಶನಗಳನ್ನು ನೀಡುವ ರಾಜಿ ಸೂತ್ರವನ್ನು ಇಬ್ಬರೂ ನಿರ್ಮಾಪಕರ ಮುಂದಿಡಲಾಗಿದೆ ಎನ್ನಲಾಗಿದೆ. [ಹ್ಯಾಟ್ರಿಕ್ ಹೀರೋ]