Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟಿ ಮಂಜುಳಾ ಕೊಲೆ ಪ್ರಕರಣ; ಪತಿಯೇ ಹಂತಕ
ಮಂಜುಳಾ ಅವರು 'ಪ್ರಾಣ', 'ಓಂಕಾರ', 'ಅಪ್ಪು' ಚಿತ್ರಗಳು ಸೇರಿದಂತೆ ದೂರದರ್ಶನ ಧಾರಾವಾಹಿ 'ಗುಪ್ತಗಾಮಿನಿ'ಯಲ್ಲಿ ಅಭಿನಯಿಸಿದ್ದರು. ಆರು ತಿಂಗಳ ಹಿಂದೆ ಮಂಜುಳಾ ಕೊಲೆಯಾಗಿದ್ದರು. ಪತ್ನಿ ಶೀಲ ಶಂಕಿಸಿ ಮಂಜುಳಾ ಅವರ 2ನೇ ಪತಿ ಯೋಗೀಶ್ ಹತ್ಯೆ ಮಾಡಿಸಿ ಶವವನ್ನು ತಾವರೆಕೆರೆ ಬಳಿ ಹೂತಿಟ್ಟಿದ್ದ.
ಘಟನೆಯ ವಿವರಗಳು: ಹತ್ಯೆಗೀಡಾದ ಮಂಜುಳಾ ಅವರು ಬೆಂಗಳೂರಿನ ನಂದಿನಿಲೇಔಟ್ ನಿವಾಸಿ. ಮಂಜುಳಾ ಅವರಿಗೆ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳಿದ್ದರು. ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಿಬಿಎಂಪಿ ಗುತ್ತಿಗೆದಾರನಾಗಿದ್ದ ಯೋಗೀಶ್ನನ್ನು ಪ್ರೀತಿಸಿ ಮದುವೆಯಾಗಿದ್ದರು.
ಮೊದಲ ಪತಿಗೆ ವಿವಾಹ ವಿಚ್ಛೇದನ ನೀಡಿ ಯೋಗೀಶ್ರನ್ನು ಎರಡನೆ ಮದುವೆ ಮಾಡಿಕೊಂಡಿದ್ದ ಮಂಜುಳಾ ನಂದಿನಿ ಲೇಔಟ್ನಲ್ಲಿ ನೆಲೆಸಿದ್ದರು. ಆರ್ಥಿಕವಾಗಿ ಸದೃಢವಾಗಿದ್ದ ಯೋಗೀಶ್ ದುಶ್ಚಟಗಳ ದಾಸನಾಗಿದ್ದ. ಪತ್ನಿಯ ನಡವಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಆಕೆಯನ್ನು ಎಲ್ಲೂ ಹೊರಗೆ ಕಳುಹಿಸದೆ ಹಲ್ಲೆ ನಡೆಸುತ್ತಿದ್ದ ಎಂದು ಪೊಲೀಸರು ವಿವರ ನೀಡಿದ್ದಾರೆ.
ಮಂಜುಳಾ ಶೀಲದ ಬಗ್ಗೆ ಶಂಕಿಸುತ್ತಿದ್ದ ಯೋಗೀಶ್ ಈ ವಿಚಾರವಾಗಿ ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಇದರಿಂದ ತೀವ್ರ ಬೇಸತ್ತಿದ್ದ ಆತ ಆಕೆಯನ್ನು ಹೇಗಾದರೂ ಮುಗಿಸಲು ಸಂಚು ರೂಪಿಸಿದ. ಮಂಜುಳಾರನ್ನು ಮುಗಿಸಲು ವಿಕ್ರಮ್ ಮತ್ತು ಆತನ ಸಹಚರರಿಗೆ ಆರು ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಸುಪಾರಿ ಹಂತಕರಾದ ವಿಕ್ರಮ್ ಮತ್ತು ಆತನ ಸಹಚರರು ಮನೆಗೆ ನುಗ್ಗಿ ಮಂಜುಳಾರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಶವವನ್ನು ಕಾರಿನಲ್ಲಿ ತೆಗೆದುಕೊಂಡು ತಾವರೆಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಹೂತಿಟ್ಟಿದ್ದರು. ಜುಲೈ10, 2010ರಂದು ಈ ಕೊಲೆ ನಡೆದಿತ್ತು. ಅದಾದ ಎರಡು ದಿನಗಳ ಬಳಿಕ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಯೋಗೀಶ್ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ.
ಯೋಗೀಶ್ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮಂಜುಳಾ ಸಹೋದರಿ ಮಮತಾ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಪೊಲೀಸರು ಯೋಗೀಶನನ್ನು ವಶಕ್ಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬಯಲಾಗಿದ್ದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಮಂಜುಳಾ ಅವರ ಪತಿ ಯೋಗೀಶ್ (33), ವಿಕ್ರಮ್ ಉರುಫ್ ಲೋಕಿ (29), ಎ ಅನಿಲ್ (22), ಬಾಬು (26), ಎಚ್ ಅರುಣ್ (22), ಪ್ರಕಾಶ್ (25) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ರು.58 ಲಕ್ಷ ನಗದು, 60 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರುಣ್, ಬಾಬು ವಿರುದ್ಧ ನೆಲಮಂಗಲ ಪೊಲೀಸ್ ಠಾಣೆಯಲಿ ಅಪಹರಣ ಪ್ರಕರಣ ಹಾಗೂ ಅನಿಲ್ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.