Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಲೆ ಬೆದರಿಕೆ -ಸುಷ್ಮಾ ದೂರು
- ದಟ್ಸ್ಕನ್ನಡ ಬ್ಯೂರೊ
ಚಿತ್ರದ ನಿರ್ಮಾಪಕರಾದ ಉಮೇಶ್ ಬಣಕಾರ್, ನರೇಶ್ ಜೈನ್ ಹಾಗೂ ಭಾ.ಮಾ.ಹರೀಶ್ ತಮಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ಈ ಮೂರು ಮಂದಿ ಮುಂಚಿನಿಂದಲೂ ತಮಗೆ ತೊಂದರೆ ಕೊಡುತ್ತಿದ್ದರು ಎಂದು ಸುಷ್ಮಾ ತಮ್ಮ ದೂರಿನಲ್ಲಿ ಆಪಾದಿಸಿದ್ದಾರೆ. ಈ ದೂರನ್ನು ಪೊಲೀಸ್ ಆಯುಕ್ತ ಮರಿಸ್ವಾಮಿ ಅವರು ಹೆಚ್ಚಿನ ತನಿಖೆಗಾಗಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಮಾ.13ರ ಶನಿವಾರ ರಾಜರಾಜೇಶ್ವರಿನಗರದ ಕ್ಲಬ್ ಒಂದರಲ್ಲಿ ತಮ್ಮನ್ನು ಭೇಟಿಯಾದ ಮೂವರು ನಿರ್ಮಾಪಕರು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಆ್ಯಸಿಡ್ ಎರಚುವುದಾಗಿ, ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದರು ಎಂದು ಸುಷ್ಮಾ ಹೇಳಿದ್ದಾರೆ.
ಆರೋಪಿಗಳ ಮಾತುಗಳನ್ನು ಮೊಬೈಲ್ ಫೋನ್ ರೆಕಾರ್ಡರ್ನಲ್ಲಿ ದಾಖಲಿಸಿಕೊಂಡಿದ್ದೇನೆ. ಆರೋಪಿಗಳು ನನ್ನ ಮೊಬೈಲ್ಗೆ ಮಾಡಿರುವ 18 ಕರೆಗಳನ್ನು ಸ್ವೀಕರಿಸಿದ್ದೇನೆ. 48 ಮಿಸ್ಡ್ ಕಾಲ್ಗಳು ಕೂಡ ಮೊಬೈಲ್ನಲ್ಲಿ ದಾಖಲಾಗಿವೆ ಎಂದು ಸುಷ್ಮಾ ದೂರಿನಲ್ಲಿ ತಿಳಿಸಿದ್ದಾರೆ.
ಎಲ್ಲಾ ಬರೀ ಸುಳ್ಳು :
ನಟಿ ಸುಷ್ಮಾ ಅವರು ತಮ್ಮ ವಿರುದ್ಧ ಸಲ್ಲಿಸಿರುವ ದೂರಿನಲ್ಲಿ ಸ್ವಲ್ಪವೂ ಸತ್ಯಾಂಶವಿಲ್ಲ ಎಂದು ನಿರ್ಮಾಪಕ ಭಾ.ಮ.ಹರೀಶ್ ಹೇಳಿದ್ದಾರೆ.
ಮಾರ್ಚ್ 26ರಂದು ‘ಅಯ್ಯೋ ಪಾಂಡು’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಯುಗಾದಿ ದಿನದಂದು ಟೀವಿ ವಾಹಿನಿಯಾಂದರಲ್ಲಿ ಚಿತ್ರದ ಕುರಿತು ಕಾರ್ಯಕ್ರಮವೊಂದನ್ನು ಪ್ರಸಾರ ಮಾಡಲು ಉದ್ದೇಶಿಸಿದ್ದು , ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಷ್ಮಾ ಅವರನ್ನು ಕೇಳಿದಾಗ ಅವರು ಅನಗತ್ಯ ವಿವಾದ ಸೃಷ್ಟಿಸಿದ್ದಾರೆ ಎಂದು ಹರೀಶ್ ದೂರಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುತ್ತಿದ್ದು , ಈ ಸಂದರ್ಭದಲ್ಲಿ ಸುಷ್ಮಾ ಅವರ ಆಪಾದನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದೂ ಅವರು ಹೇಳಿದ್ದಾರೆ.
ಮುಖಪುಟ / ಸ್ಯಾಂಡಲ್ವುಡ್