Don't Miss!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- News ಬಿಜೆಪಿ 400 ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವುದ್ಯಾಕೆ.?-ಯತೀಂದ ಸಿದ್ದರಾಮಯ್ಯ ಹೇಳಿದ್ದೇನು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಐಡಿಗೆ ಚಳ್ಳೆಹಣ್ನು ತಿನ್ನಿಸಿ ಅಮೆರಿಕಾಗೆ ಹಾರಿದ ರಂಜಿತಾ
ನಿತ್ಯಾನಂದ ರಾಸಲೀಲೆ ಪ್ರಸಂಗದ ಪ್ರಮುಖ ಪಾತ್ರಧಾರಿಣಿ ಕಮ್ ಸಾಕ್ಷಿಯಾಗಿರುವ ನಟಿ ರಂಜಿತಾ ಸಿಐಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ, ಅಮೆರಿಕಕ್ಕೆ ಎಸ್ಕೇಪ್ ಆಗಿದ್ದಾರೆ. ಅಮೆರಿಕಾದಲ್ಲಿ ಸೋದರಿಯ ಜೊತೆಗಿರುವ ರಂಜಿತಾ ಎಸ್ಕೇಪ್ ಆಗಿದ್ದು ಯಾಕೆ ಎಂಬ ಪತ್ರವನ್ನು ಸಿಐಡಿಗೆ ಕಳುಹಿಸಿದ್ದಾರಂತೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಚಾರಣೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ , ಆರೋಗ್ಯ ಸುಧಾರಿಸಿದ ನಂತರ ವಿಚಾರಣೆಗೆ ಖುದ್ದು ಹಾಜರಾಗುತ್ತೇನೆ. ಅಲ್ಲಿಯವರೆಗೂ ನನಗಾಗಿ ವ್ಯರ್ಥಹುಡುಕಾಟ ನಡೆಸಬೇಡಿ ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರಂತೆ.
ಆದರೆ, ರಂಜಿತಾಳಿಂದ ಯಾವುದೇ ಪತ್ರ ಬಂದಿಲ್ಲ. ಈ ವರೆಗೂ ವಿಚಾರಣೆಗೆ ಹಾಜರಾಗಿಲ್ಲ, ನಿತ್ಯಾನಂದ ಕಾಮಕೇಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ನೋಟಿಸ್ ಗೆ ಉತ್ತರವನ್ನೇ ನೀಡಿಲ್ಲ . ರಂಜಿತಾ ಆಗಲಿ , ಆಕೆಯ ವಕೀಲರಾಗಲಿ ನಮ್ಮ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಸಿಐಡಿ ಎಸ್ಪಿ ಯೋಗಪ್ಪ ಹೇಳುತ್ತಾರೆ.
ನಿತ್ಯಾನಂದನ ಲೈಂಗಿಕ ಹಗರಣ ಸಾಬೀತು ಪಡಿಸಲು ರಂಜಿತಾ ಅವರ ವಿಚಾರಣೆ ಅವಶ್ಯ ಹೆಚ್ಚಾಗಿದೆ. ಅವರನ್ನು ಕರೆತರುವ ಪ್ರಯತ್ನ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಆದರೆ, ನೋಟಿಸ್ ಗೆ ಉತ್ತರ ಕೊಡದ ರಂಜಿತಾ , ಅಮೆರಿಕದಲ್ಲಿ ಕೂತು ನಿತ್ಯಾನಂದನ ಪಂಚಾಗ್ನಿ ಶುದ್ಧಿಕರಣ ಯೋಗವನ್ನು ವೀಕ್ಷಿಸುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ.