Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯಿ ಪ್ರಕಾಶ್ ಗೆ ಒತ್ತಡ ಹೇರಿಲ್ಲ; ತ್ಯಾಗರಾಜ
ಬಾಕಿ ಹಣ ಹಿಂತಿರುಗಿಸುವಂತೆ ನಿರ್ದೇಶಕ ಸಾಯಿ ಪ್ರಕಾಶ್ ಅವರಿಗೆ ಎಲ್ಲೂ ಒತ್ತಡ ಹೇರಿಲ್ಲ ಎಂದು ನಿರ್ಮಾಪಕ ಕಮ್ ಲೇವಾದೇವಿ ವ್ಯವಹಾರಸ್ಥ ತ್ಯಾಗರಾಜು ಸ್ಪಷ್ಟಪಡಿಸಿದ್ದಾರೆ. ಇವರು ಶಿವರಾಜ್ ಕುಮಾರ್ ಮತ್ತು ಮೀರಾ ಜಾಸ್ಮಿನ್ ಮುಖ್ಯಭೂಮಿಕೆಯ 'ದೇವರು ಕೊಟ್ಟ ತಂಗಿ' ಚಿತ್ರದ ವಿತರಕ. ಸಾಯಿ ಪ್ರಕಾಶ್ ಅವರು ಇತ್ತೀಚೆಗೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಈ ಹಿಂದೆ ನಿರ್ಮಾಪಕ ಜಾಯ್ ಸಿಮೋನ್ ಮಾತನಾಡುತ್ತಾ, ನಿದ್ದೆ ಮಾತ್ರ ಸೇವಿಸುವುದಕ್ಕೂ ಮುನ್ನ ಸಾಯಿ ಪ್ರಕಾಶ್ ಅವರು ನನಗೆ ಎಸ್ ಎಂಎಸ್ ಮಾಡಿದ್ದರು. '' ಹಣ ಹಿಂತಿರುಗಿಸುವಂತೆ ತ್ಯಾಗು ತೀವ್ರ ಒತ್ತಡ ಹೇರುತ್ತಿದ್ದಾರೆ. ನಾನು ಎಲ್ಲಾ ಭರವಸೆಗಳನ್ನು ಕಳೆದುಕೊಂಡಿದ್ದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ''ಎಂದು ಎಸ್ ಎಂ ಎಂ ಸಂದೇಶದಲ್ಲಿ ತಿಳಿಸಿದ್ದರು ಎಂದು ಹೇಳಿದ್ದರು. ಆದರೆ ತ್ಯಾಗರಾಜ್ ಈ ಎಲ್ಲಾ ಸುದ್ದಿಯನ್ನು ಅಲ್ಲಗಳೆದಿದ್ದಾರೆ.
ಇದೀಗ ತ್ಯಾಗರಾಜು ಅವರು ಗಣೇಶ್ ನಾಯಕ ನಟನಾಗಿರುವ 'ಉಲ್ಲಾಸ ಉತ್ಸಾಹ' ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ. ನಾನೂ ಸಹ ಹಣಕಾಸು ತೊಂದರೆಗೆ ಸಿಲುಕಿದ್ದೇನೆ. ಪರಿಸ್ಥಿತಿ ಹೀಗಿದ್ದರೂ ನಾನು ಸಾಯಿ ಪ್ರಕಾಶ್ ಅವರ ಮೇಲೆ ಹಣ ಹಿಂತಿರುಗಿಸುವಂತೆ ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲ ಚಿತ್ರಗಳ ವಿತರಣೆಯಿಂದ ನಾನೂ ಸಹ ಹಣ ಕಳೆದುಕೊಂಡು ಲಾಸಾಗಿದ್ದೇನೆ. ಸಾಯಿ ಪ್ರಕಾಶ್ ಅವರ ಚಿತ್ರವನ್ನು ಬಿಡುಗಡೆ ಮಾಡಲು ನಾನು ಹಣ ಸಹಾಯ ಮಾಡಿದ್ದೆ. ಈಗಲೂ ಸಾಯಿ ಪ್ರಕಾಶ್ ಅವರು ಕೆಲ ದಿನಗಳಲ್ಲೇ ಹಣ ಹಿಂತಿರುಗಿಸುವ ಭರವಸೆಯನ್ನು ನೀಡಿದ್ದಾಗಿ ತ್ಯಾಗರಾಜ್ ತಿಳಿಸಿದ್ದಾರೆ.