twitter
    For Quick Alerts
    ALLOW NOTIFICATIONS  
    For Daily Alerts

    ಉಡ ಚಿತ್ರದ ಹೀರೋ ಮೇಲೆ ಮಾರಣಾಂತಿಕ ಹಲ್ಲೆ

    |

    ಕನ್ನಡದ 'ಉಡ' ಚಿತ್ರದ ನಾಯಕ ನಟ ಯುವರಾಜ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವರಾಜ್ ಕೆನ್ನೆಯ ಎರಡು ಬದಿಗಳಲ್ಲಿ ಬ್ಲೇಡ್ ನಿಂದ ಹಾಗೂ ಕಾಲಿಗೆ ಮಚ್ಚಿನಿಂದ ಗಾಯಗೊಳಿಸಲಾಗಿದೆ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಹಳೆಯ ವೈಷಮ್ಯವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಸಂಭಾವನೆ ವಿಚಾರವಾಗಿ 'ಉಡ' ಚಿತ್ರದ ನಿರ್ಮಾಪಕ ಮತ್ತು ನಾಯಕ ನಟ ಯುವರಾಜ ನಡುವೆ ಈ ಹಿಂದೆ ಜಟಾಪಟಿ ನಡೆದಿತ್ತು. ಯುವರಾಜ್ ಗೆ ಸಂಭಾವನೆ ಕೊಟ್ಟಿರಲಿಲ್ಲ ಎನ್ನಲಾಗಿದೆ. ರಾಜೀವ್ ಎಂಬುವವರು ಕರೆ ಮಾಡಿದ್ದಾಗಿ ನವರಂಗ್ ಚಿತ್ರಮಂದಿರದ ಹತ್ತಿರ ಬರಲು ಹೇಳಿದ್ದರು. ಅಲ್ಲಿಗೆ ಹೋದಾಗ ಮೂವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾಗಿ ಯುವರಾಜ್ ತಿಳಿಸಿದ್ದಾರೆ.

    ಈ ಸಂಬಂಧ ರಾಜಾಜಿನಗರ ಪೊಲೀಸರು ಒಬ್ಬರನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಈಗಾಗಲೇ ತೆರೆಕಂಡಿರುವ ಉಡ ಚಿತ್ರವನ್ನು ಅಕ್ಬರ್ ಪಾಷಾ ಎಂಬುವರು ನಿರ್ಮಿಸಿದ್ದರು. ಶಶಾಂಕ್ ರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದು ಯುವರಾಜ್ ಮತ್ತು ಸಂಚಿತಾ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.

    (ದಟ್ಸ್ ಕನ್ನಡ ಚಿತ್ರವಾರ್ತೆ)

    Monday, November 16, 2009, 13:01
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X