Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿಯಲ್ಲಿ ವೀರ್ ಝಾರಾ ;ಮೂರು ವಾರ ಒಪ್ಪಂದ ಮೂರಾಬಟ್ಟೆ
ಬೆಂಗಳೂರು : ನಗರದ ಕಾವೇರಿ ಚಿತ್ರ ಮಂದಿರದಲ್ಲಿ ಸೋಮವಾರ(ನ.15)ಹಿಂದಿ ಚಿತ್ರ ವೀರ್ ಝಾರಾ ತೆರೆ ಕಂಡಿದೆ. ಈ ಮೂಲಕ ಪರಭಾಷಾ ಚಿತ್ರಗಳಿಗೆ ಸಂಬಂಧಿಸಿದ ಮೂರು ವಾರದ ಒಪ್ಪಂದವನ್ನು ಪ್ರದರ್ಶಕರು ಗಾಳಿಗೆ ತೂರಿದ್ದಾರೆ.
ಪೋಲೀಸರ ಬೆಂಗಾವಲಿನಲ್ಲಿ ಯಶ್ಛೋಪ್ರಾ ನಿರ್ದೇಶನದ ಹೊಸ ಚಿತ್ರ ವೀರ್ ಝಾರಾ ತೆರೆಗೆ ಬಂದಿದೆ. ನಗರದಲ್ಲಿ ಪ್ರದರ್ಶಕರ ಸಹಭಾಗಿತ್ವವಿಲ್ಲದೆ ನೇರವಾಗಿ ಮುಂಬೈನಿಂದ ಯಶ್ಛೋಪ್ರಾ ಅವರೇ ಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.
ಪ್ರದರ್ಶನದ ಸುಳಿವು ಸಿಕ್ಕಿದ ತಕ್ಷಣ ಕಾವೇರಿ ಚಿತ್ರಮಂದಿರದ ಬಳಿ ಕರುನಾಡ ಸೇನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು. ನಂತರ ಅವರನ್ನು ಪೋಲೀಸರು ಬಂಧಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ.ಗಂಗರಾಜು ಸ್ಥಳಕ್ಕೆ ತೆರಳಿ, ಚಿತ್ರ ಮಂದಿರದ ಮಾಲೀಕರ ಮನವೊಲಿಸಲು ನಡೆಸಿದ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಸಂಬಂಧ ಚಿತ್ರಮಂದಿರದ ಮಾಲೀಕರಿಗೆ ನೋಟೀಸ್ ನೀಡಲು ನಿರ್ಧರಿಸಿರುವುದಾಗಿ ಮಂಡಳಿ ತಿಳಿಸಿದೆ.
ಸಭೆ : ಮುಂದಿನ ಬೆಳವಣಿಗೆ ಹಾಗೂ ಕನ್ನಡ ಚಿತ್ರೋದ್ಯಮದ ಉಳಿವಿಗೆ ಕಾರ್ಯತಂತ್ರ ರೂಪಿಸಲು ನಿರ್ಮಾಪಕರ ಸಂಘ ಮಂಗಳವಾರ (ನ.16) ಸಭೆ ನಡೆಸುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್