Don't Miss!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳ್ಳತನ ಆರೋಪದಿಂದ ಗೋವಿಂದಾಯ ನಮಃ ಮುಕ್ತ
ಗೋವಿಂದನ ಮೇಲಿನ ಕಳ್ಳತನ ಆರೋಪ ಸುಳ್ಳಾಗಿದೆ. ನಮ್ದುಕೆ ಕತೆ ಕದ್ದಿಲ್ಲ ಎಂದು ಗೋವಿಂದ ಗೆಲುವಿನ ನಗೆ ಬೀರಿದ್ದಾನೆ. 'ಗೋವಿಂದಾಯ ನಮಃ' ಚಿತ್ರದ ಕತೆ ನಮ್ಮದು. ತಮ್ಮ ಚಿತ್ರದ 'ಅವ್ನಂದ್ರೆ ಅವ್ನೆ' ಕತೆಯನ್ನು ಕದ್ದು 'ಗೋವಿಂದಾಯ ನಮಃ' ಚಿತ್ರ ಮಾಡಿದ್ದಾರೆ ಎಂದು ವೇಣುಗೋಪಾಲ ಎಂಬುವವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.
ಈ ಸಂಬಂಧ ಚಲನಚಿತ್ರ ನಿರ್ದೇಶಕರ ಸಂಘ ಎರಡೂ ಚಿತ್ರಗಳನ್ನು ವೀಕ್ಷಿಸಿದೆ. 'ಗೋವಿಂದಾಯ ನಮಃ' ಚಿತ್ರದ ಕತೆ ಕದ್ದ ಕತೆಯಲ್ಲ. ಈ ಚಿತ್ರಕ್ಕೂ 'ಅವ್ನಂದ್ರೆ ಅವನೇ' ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತೀರ್ಮಾನಿಸಿದೆ. 2005ರಲ್ಲಿ ತೆರೆಕಂಡಿದ್ದ 'ಅವ್ನಂದ್ರೆ ಅವ್ನೆ' ಚಿತ್ರದ ಪ್ರೇರಣೆಯಿಂದಲೂ 'ಗೋವಿಂದಾಯ ನಮಃ' ಚಿತ್ರ ತೆಗೆದಿಲ್ಲ ಎಂದಿದ್ದಾರೆ ಕರ್ನಾಟಕ ಚಲನಚಿತ್ರ ಲೇಖರ ಸಂಘದ ಅಧ್ಯಕ್ಷ ಕೆ.ನಂಜುಂಡ.
ಈ ಆರೋಪದಿಂದ ನಿರ್ದೇಶಕ ಪವನ್ ಒಡೆಯರ್ ಅವರಿಗೂ ತೀರಾ ಮುಜುಗರವಾಗಿದೆಯಂತೆ. ಜನ ನಮ್ಮನ್ನು ಅನುಮಾನದಿಂದ ನೋಡುವಂತಾಗಿದೆ. ಕತೆ ಕದ್ದ ಆರೋಪ ಮಾಡಿದ ವೇಣುಗೋಪಾಲ್ ನಮ್ಮನ್ನು ಬೇಷರತ್ ಕ್ಷಮೆಯಾಚಿಸಬೇಕು ಎಂದಿದ್ದಾರೆ. ಇದರ ಹಿಂದೆ ಯಾವುದೋ ಷಡ್ಯಂತ್ರ ಇರುವ ಬಗ್ಗೆಯೂ ಪವನ್ ಅನುಮಾನ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)