ರಂಗಾಯಣಕ್ಕೆ ಮಂಡ್ಯ ರಮೇಶ್ ಆಯ್ಕೆಗೆ ವಿರೋಧ

By Rajendra

Mandya Ramesh
ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಚಲನಚಿತ್ರ ನಟ ಮಂಡ್ಯ ರಮೇಶ್ ಆಯ್ಕೆ ಬಗ್ಗೆ ವಿರೋಧ ವ್ಯಕ್ತವಾಗಿದೆ. ಮಂಡ್ಯ ರಮೇಶ್ ವಿರುದ್ಧ ನ್ಯಾಯಾಲಯದಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇಂತಹ ಕಳಂಕಿತ ವ್ಯಕ್ತಿಯನ್ನು ಆಯ್ಕೆ ಮಾಡಬಾರದು ಎಂದು ಕೀರ್ತಿ ಫಿಲಂ ಇನ್ಸ್‌ಟಿಟ್ಯೂಟಿನ ವ್ಯವಸ್ಥಾಪಕ ನಿರ್ದೇಶಕ ಪಿ ರಾಜಪ್ಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈ ಹಿಂದೆ ಕೀರ್ತಿ ಫಿಲಂ ಇನ್ಸ್‌ಟಿಟ್ಯೂಟ್‌ನಲ್ಲಿ ಮಂಡ್ಯ ರಮೇಶ್ ಸೇವೆ ಸಲ್ಲಿಸುತ್ತಿದ್ದಾಗ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರಿಂದ ಅವರನ್ನು ಸಂಸ್ಥೆಯಿಂದ ವಜಾ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ ರಾಜಪ್ಪ.

ಬಳಿಕ ತಮ್ಮ ಸಂಸ್ಥೆಯಿಂದ ಕಡತಗಳನ್ನು ಅಪಹರಿಸಿ "ನಟನಾ" ಎಂಬ ಸಂಸ್ಥೆಯನ್ನು ಕಟ್ಟಿ ನಮ್ಮ ಸಂಸ್ಥೆ ಹಾಗೂ ಸಂಸ್ಥಾಪಕರ ವಿರುದ್ಧ ಮಾಧ್ಯಮಗಳಲ್ಲಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದರು. ಅವರ ಆರೋಪಗಳನ್ನು ಟಿವಿ 9 ವಾಹಿನಿ ಪ್ರಸಾರ ಮಾಡಿತ್ತು. ಟಿವಿ9 ವಿರುದ್ಧ ನ್ಯಾಯಲಯ ವಾರೆಂಟ್ ಜಾರಿ ಮಾಡಿತ್ತು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಇಂತಹ ಕಳಂಕಿತ ವ್ಯಕ್ತಿಯನ್ನು ರಂಗಾಯಣ ನಿರ್ದೇಶಕ ಮಾಡಬಾರದು ಎಂದು ರಾಜಪ್ಪ ಮುಖ್ಯಮಂತ್ರಿಗಳು, ಗೃಹಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಮೂಲಕ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಮಂಡ್ಯ ರಮೇಶ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ರಾಜಪ್ಪ. (ಏಜೆನ್ಸೀಸ್)

More from Filmibeat

English summary
Kannada Film actor cum theater personality Mandya Ramesh's selection for the post of Rangayana director has strongly opposed by Kirthi Film Institute director Rajappa. Several senior theatre artistes are learnt to be lobbying in Bangalore for the post of Rangayana Director, which had fallen vacant after the demise of Lingadevaru Halemane recently.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X