ಕಾಫಿ ಶಾಪ್ ಚಿತ್ರದ ವಿರುದ್ಧ ಏ.20ರಂದು ಬೃಹತ್ ಪ್ರತಿಭಟನೆ

By Rajendra

ಕಳೆದ ಕೆಲ ತಿಂಗಳಿಂದತಣ್ಣಗಿದ್ದ ಡಬ್ಬಿಂಗ್ ವಿವಾದ ಈಗ ಮತ್ತೆ ಭುಗಿಲೆದ್ದಿದೆ. ಪರಭಾಷಾ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡುವ ಸಂಸ್ಕೃತಿ ವಿರುದ್ಧ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ(ಕಚಕಾಂತಕ) ತಿರುಗಿ ಬಿದ್ದಿದೆ. ಯಾವುದೇ ಕಾರಣಕ್ಕೂ ಡಬ್ಬಿಂಗ್‌ಗೆ ಅವಕಾಶ ಕೊಡುವುದಿಲ್ಲ ಎಂದು ಕಚಕಾಂತಕ ಒಕ್ಕೂಟ ಅಧ್ಯಕ್ಷ ಅಶೋಕ್ ಗುಡುಗಿದ್ದಾರೆ.

ಕಳೆದ 50 ವರ್ಷಗಳಿಂದ ಕನ್ನಡ ಚಿತ್ರರಂಗ ಡಬ್ಬಿಂಗ್ ಪಿಡುಗಿಲ್ಲದೆ ಇತ್ತು. ಆದರೆ ಈಗ 'ಕಾಫಿ ಶಾಪ್' ಚಿತ್ರ ಕನ್ನಡಕ್ಕೆ ಡಬ್ ಮಾಡಲಾಗಿದೆ. ಈ ಚಿತ್ರದ ವಿರುದ್ಧ ವ್ಯಾಪಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಈ ಚಿತ್ರವನ್ನು ಯಾವುದೇ ಕಾರಣಕ್ಕೂ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಅಶೋಕ್ ಇಂದು(ಏ.18) ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಬ್ಬಿಂಗ್ ವಿರೋಧಿಸಿ ಏ.20ರಂದು ಬೆಳಗ್ಗೆ 10 ಗಂಟೆಗೆ ಚಲನಚಿತ್ರ ವಾಣಿಕ್ಯ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ. ರೈತ ಚಳವಳಿ ಮುಖಂಡರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಕಲಾವಿದರ ಸಂಘದ ಅಧ್ಯಕ್ಷ ಅಂಬರೀಷ್, ಶಿವರಾಜ್ ಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅಶೋಕ್ ವಿವರ ನೀಡಿದರು.

'ಕಾಫಿ ಶಾಪ್' ಚಿತ್ರ ಏ.22ರಂದು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಚಿತ್ರಮಂದಿರಗಳ ಮಾಲೀಕರು ಹಾಗೂ ಮಲ್ಟಿಫ್ಲೆಕ್ಸ್ ಮಾಲೀಕರಿಗೆ ಮನವಿ ಮಾಡಿ ಚಿತ್ರವನ್ನು ಬಿಡುಗಡೆ ಮಾಡದಂತೆ ಕೋರಲಾಗುವುದು. ಒಂದು ವೇಳೆ ಚಿತ್ರವನ್ನು ಬಿಡುಗಡೆ ಮಾಡಿದರೆ ಮುಂದೆ ಆಗಬಹುದಾದ ಅನಾಹುತಗಳಿಗೆ ನೀವೇ ಕಾರಣರು ಎಂದು ಎಚ್ಚರಿಸಿದ್ದಾರೆ.

ಡಬ್ಬಿಂಗ್ ಸಂಸ್ಕೃತಿ ವಿರುದ್ಧ ಈಗಾಗಲೆ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಬೀದಿಗಿಳಿಯುವುದಾಗಿ ಎಚ್ಚರಿಸಿದ್ದರು. ಅವರ ಆರೋಗ್ಯ ಸರಿಇಲ್ಲದ ಕಾರಣ ಅವರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ. ಚಲನಚಿತ್ರ ಕಾರ್ಮಿಕರು, ಕಲಾವಿದರು, ತಂತ್ರಜ್ಞರು, ವಿತರಕರು, ನಿರ್ಮಾಪಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

'ಕಾಫಿ ಶಾಪ್' ಚಿತ್ರದ ನಿರ್ದೇಶಕ ಗೀತಾಕೃಷ್ಣ ನ್ಯಾಯಾಲಯಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿ ಡಬ್ಬಿಂಗ್ ಚಿತ್ರವಲ್ಲವೆಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಸರ್ಕಾರದಿಂದ ಶೇ.100ರಷ್ಟು ತೆರಿಗೆ ವಿನಾಯ್ತಿ ಪಡೆದಿದ್ದಾರೆ ಎಂದು ಆರೋಪಿಸಿದ ಅವರು, ತೆರಿಗೆ ವಿನಾಯಿತಿ ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಕೆಲವು ಹಣದಾಹಿಗಳು ಡಬ್ಬಿಂಗ್ ಸಂಸ್ಕೃತಿಯನ್ನು ನಮ್ಮ ಮೇಲೆ ಹೇರಿ ನಮ್ಮ ಉದ್ಯೋಗ, ನೆಮ್ಮದಿ, ಭಾಷೆ, ಸಂಸ್ಕೃತಿಯನ್ನು ನಾಶ ಮಾಡಲು ಹೊರಟಿದ್ದಾರೆ. ಇಂತಹ ಪ್ರಯತ್ನಕ್ಕೆ ಅವಕಾಶ ಮಾಡಿಕೊಡದೆ ಇದರ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಆದರೆ ತನ್ನ ಕಾಫಿ ಶಾಪ್ ಚಿತ್ರ ಡಬ್ಬಿಂಗ್ ಚಿತ್ರ ಅಲ್ಲ ಎಂದು ಗೀತಾ ಈಗಾಗಲೆ ಕೃಷ್ಣ ಸ್ಪಷ್ಟಪಡಿಸಿದ್ದಾರೆ.

More from Filmibeat

English summary
Karnataka Workers Union President Ashok has urged the exhibitors not to screen the controversial film 'Koffi Shop' as it is said to be dubbed from the Telugu film of a similar name . Ashok also said the workers union would be requesting the exhibitors personally to not to screen the film at any cost. He also said that they will protest in front of the KFCC on 20th April.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X