Don't Miss!
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗತಿಹಳ್ಳಿ ಚಂದ್ರಶೇಖರ್ಗೆ ಎಂಎನ್ಸಿಗಳಿಂದ ಬೆದರಿಕೆ
ನಿರ್ಮಾಣದ ಹಂತದಲ್ಲಿರುವ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಮಾತಾಡ್ ಮಾತಾಡ್ ಮಲ್ಲಿಗೆ’ ಚಿತ್ರ ಬಹುರಾಷ್ಟ್ರೀಯ ಕಂಪನಿಗಳ ನಿದ್ದೆ ಕೆಡಿಸಿದೆ.
ಅನೇಕ ಜೈವಿಕ ತಂತ್ರಜ್ಞಾನ(ಬಯೋಟೆಕ್) ಕಂಪನಿಗಳು ಚಿತ್ರ ನಿರ್ಮಾಣ ಸ್ಥಗಿತಗೊಳಿಸಬೇಕೆಂದು ನಾಗತಿಹಳ್ಳಿ ಅವರಿಗೆ ಬೆದರಿಕೆ ಇ-ಮೇಲ್ಗಳನ್ನು ರವಾನಿಸಿವೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಲಾರೆವು ಎಂದು ಕೆಲವು ಮೇಲ್ಗಳಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.
ನವದೆಹಲಿಯ ಮಾನವ ಹಕ್ಕುಗಳ ಆಯೋಗದ ದೇವೇಂದ್ರ ಶರ್ಮಾ ಅವರೊಂದಿಗೆ ಮಾತುಕತೆ ನಡೆಸಿ, ನಮ್ಮ ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರದ ಚಿತ್ರಕಥೆ ಸಿದ್ಧಗೊಳಿಸಲಾಗಿದೆ. ಏನೇ ಒತ್ತಡ ಬಂದರೂ ಚಿತ್ರ ಪೂರ್ಣಗೊಳಿಸುತ್ತೇನೆ ಎನ್ನುತ್ತಾರೆ ನಾಗತಿಹಳ್ಳಿ.
ಬಹುರಾಷ್ಟ್ರೀಯ ಕಂಪನಿಗಳ ಬಣ್ಣ ಸಿನಿಮಾದಲ್ಲಿ ಬಯಲಾಗಲಿದೆ. ಈ ಆತಂಕದಿಂದಲೇ ಬೆದರಿಕೆ ಮೇಲ್ಗಳು ಬಂದಿವೆ. ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನನ್ನ ಹಾಗೂ ನಿರ್ಮಾಪಕರ ಯೋಜನೆಗಳ ಪ್ರಕಾರ ಚಿತ್ರ ಮುಂದುವರಿಯಲಿದೆ. ಆದರೆ ಬೆದರಿಕೆ ಹಾಕಿದವರಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲಿದ್ದೇನೆ ಎಂದು ಅವರು ಘೋಷಿಸಿದ್ದಾರೆ.