Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಗೆ ತಾರಾ ಸಡನ್ ಬ್ರೇಕ್
ಈ ಬಾರಿ (2009-10) ಕನ್ನಡ ಚಿತ್ರಗಳಿಗೆ ಸಬ್ಸಿಡಿ ನೀಡುವ ವಿಚಾರದಲ್ಲಿ ಭಾರಿ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷೆ ತಾರಾ ಅವರು ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಯನ್ನು ತಡೆಹಿಡಿಯುವಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಹಿರಿಯ ನಟ ಹಾಗೂ ನಿರ್ಮಾಪಕ ಎಸ್. ಶಿವರಾಂ ಅವರು ಸಬ್ಸಿಡಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಆಯ್ಕೆ ಸಮಿತಿಯಲ್ಲಿ ಅಭಿರುಚಿ ಚಂದ್ರು, ಮಹಾದೇವ, ರಾಮಕೃಷ್ಣ, ಬಿ ಆರ್ ಲಕ್ಷ್ಮಣರಾವ್, ಮಹಾಬಲಮೂರ್ತಿ ಕೊಡ್ಲೆಕೆರೆ, ಸುರೇಶ್ ಮಂಗಳೂರು, ಎಸ್ ಎನ್ ರವಿಶಂಕರ್ ಸದಸ್ಯರಾಗಿದ್ದಾರೆ.
ಸಬ್ಸಿಡಿ ನೀಡುವ ವಿಚಾರದಲ್ಲಿ ಇವರೆಲ್ಲರೂ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು 'ಬೆಟ್ಟದಪುರದ ದಿಟ್ಟ ಮಕ್ಕಳು' ಚಿತ್ರದ ನಿರ್ದೇಶಕ ಕೂಡ್ಲು ರಾಮಕೃಷ್ಣ ಮಾಡಿದ್ದಾರೆ. ತಮ್ಮ ಚಿತ್ರಕ್ಕೆ ರು.25 ಲಕ್ಷ ಕೊಡಿಸುವುದಾಗಿ ಆಯ್ಕೆ ಸಮಿತಿ ಸದಸ್ಯ, ಕಿರುತೆರೆ ಕಲಾವಿದ ಸುರೇಶ್ ಮಂಗಳೂರು ರು.2.5 ಲಕ್ಷ ಲಂಚ ಪಡೆದಿದ್ದಾರೆ ಎಂದು ಕೂಡ್ಲು ಆರೋಪಿಸಿದ್ದಾರೆ.