Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಗೆ ತಾರಾ ಸಡನ್ ಬ್ರೇಕ್
ಈ ಬಾರಿ (2009-10) ಕನ್ನಡ ಚಿತ್ರಗಳಿಗೆ ಸಬ್ಸಿಡಿ ನೀಡುವ ವಿಚಾರದಲ್ಲಿ ಭಾರಿ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷೆ ತಾರಾ ಅವರು ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಯನ್ನು ತಡೆಹಿಡಿಯುವಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಹಿರಿಯ ನಟ ಹಾಗೂ ನಿರ್ಮಾಪಕ ಎಸ್. ಶಿವರಾಂ ಅವರು ಸಬ್ಸಿಡಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಆಯ್ಕೆ ಸಮಿತಿಯಲ್ಲಿ ಅಭಿರುಚಿ ಚಂದ್ರು, ಮಹಾದೇವ, ರಾಮಕೃಷ್ಣ, ಬಿ ಆರ್ ಲಕ್ಷ್ಮಣರಾವ್, ಮಹಾಬಲಮೂರ್ತಿ ಕೊಡ್ಲೆಕೆರೆ, ಸುರೇಶ್ ಮಂಗಳೂರು, ಎಸ್ ಎನ್ ರವಿಶಂಕರ್ ಸದಸ್ಯರಾಗಿದ್ದಾರೆ.
ಸಬ್ಸಿಡಿ ನೀಡುವ ವಿಚಾರದಲ್ಲಿ ಇವರೆಲ್ಲರೂ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು 'ಬೆಟ್ಟದಪುರದ ದಿಟ್ಟ ಮಕ್ಕಳು' ಚಿತ್ರದ ನಿರ್ದೇಶಕ ಕೂಡ್ಲು ರಾಮಕೃಷ್ಣ ಮಾಡಿದ್ದಾರೆ. ತಮ್ಮ ಚಿತ್ರಕ್ಕೆ ರು.25 ಲಕ್ಷ ಕೊಡಿಸುವುದಾಗಿ ಆಯ್ಕೆ ಸಮಿತಿ ಸದಸ್ಯ, ಕಿರುತೆರೆ ಕಲಾವಿದ ಸುರೇಶ್ ಮಂಗಳೂರು ರು.2.5 ಲಕ್ಷ ಲಂಚ ಪಡೆದಿದ್ದಾರೆ ಎಂದು ಕೂಡ್ಲು ಆರೋಪಿಸಿದ್ದಾರೆ.