Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಗೆ ತಾರಾ ಸಡನ್ ಬ್ರೇಕ್
ಈ ಬಾರಿ (2009-10) ಕನ್ನಡ ಚಿತ್ರಗಳಿಗೆ ಸಬ್ಸಿಡಿ ನೀಡುವ ವಿಚಾರದಲ್ಲಿ ಭಾರಿ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷೆ ತಾರಾ ಅವರು ಸಬ್ಸಿಡಿ ಚಿತ್ರಗಳ ಪಟ್ಟಿ ಬಿಡುಗಡೆಯನ್ನು ತಡೆಹಿಡಿಯುವಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಹಿರಿಯ ನಟ ಹಾಗೂ ನಿರ್ಮಾಪಕ ಎಸ್. ಶಿವರಾಂ ಅವರು ಸಬ್ಸಿಡಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಆಯ್ಕೆ ಸಮಿತಿಯಲ್ಲಿ ಅಭಿರುಚಿ ಚಂದ್ರು, ಮಹಾದೇವ, ರಾಮಕೃಷ್ಣ, ಬಿ ಆರ್ ಲಕ್ಷ್ಮಣರಾವ್, ಮಹಾಬಲಮೂರ್ತಿ ಕೊಡ್ಲೆಕೆರೆ, ಸುರೇಶ್ ಮಂಗಳೂರು, ಎಸ್ ಎನ್ ರವಿಶಂಕರ್ ಸದಸ್ಯರಾಗಿದ್ದಾರೆ.
ಸಬ್ಸಿಡಿ ನೀಡುವ ವಿಚಾರದಲ್ಲಿ ಇವರೆಲ್ಲರೂ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು 'ಬೆಟ್ಟದಪುರದ ದಿಟ್ಟ ಮಕ್ಕಳು' ಚಿತ್ರದ ನಿರ್ದೇಶಕ ಕೂಡ್ಲು ರಾಮಕೃಷ್ಣ ಮಾಡಿದ್ದಾರೆ. ತಮ್ಮ ಚಿತ್ರಕ್ಕೆ ರು.25 ಲಕ್ಷ ಕೊಡಿಸುವುದಾಗಿ ಆಯ್ಕೆ ಸಮಿತಿ ಸದಸ್ಯ, ಕಿರುತೆರೆ ಕಲಾವಿದ ಸುರೇಶ್ ಮಂಗಳೂರು ರು.2.5 ಲಕ್ಷ ಲಂಚ ಪಡೆದಿದ್ದಾರೆ ಎಂದು ಕೂಡ್ಲು ಆರೋಪಿಸಿದ್ದಾರೆ.