Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಹರಿ ವೇಲು ಕ್ಷಮೆ ಕೇಳಿದ ಸಾಹಿತಿ ನಾಗೇಂದ್ರ ಪ್ರಸಾದ್
ಡಾ. ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟ ಅವರು ಬರೆದಿರುವ ಸಿ ಅಶ್ವಥ್ ಕಂಠಸಿರಿಯಲ್ಲಿ ಮೂಡಿಬಂದ "ಹಿಂದೆ ಹೇಗೆ ಚಿಮ್ಮುತ್ತಿತ್ತು ಕಣ್ಣ ತುಂಬಾ ಪ್ರೀತಿ, ಈಗ ಯಾಕೆ ಜ್ವಲಿಸುತಿದೆ ಏನೋ ಶಂಕೆ ಭೀತಿ" ಹಾಡನ್ನು ನಿರ್ಮಾಪಕ ಕಮ್ ನಿರ್ದೇಶಕ ಡಾ. ನಾಗೇಂದ್ರ ಪ್ರಸಾದ್ ತಮ್ಮ 'ವಿನಾಯಕ ಗೆಳೆಯರ' ಬಳಗ ಚಿತ್ರದಲ್ಲಿ ಅಳವಡಿಸಿಕೊಂಡಿದ್ದರು. ಲಹರಿ ರೆಕಾರ್ಡಿಂಗ್ ಕಂಪೆನಿ ಅನುಮತಿ ಇಲ್ಲದೆ ಹಾಡನ್ನು ಅಳವಡಿಸಿದ್ದಕಾಗಿ ಲಹರಿ ಸಂಸ್ಥೆಯ ಕ್ಷಮೆ ಯಾಚಿಸಿದ್ದಾರೆ.
ಈ ಲೈಟ್ ಮ್ಯುಸಿಕ್ ಹಾಡನ್ನು ಸಂದರ್ಭಕ್ಕೆ ಅನುಗುಣವಾಗಿ ಚಿತ್ರದಲ್ಲಿ ಬಳಸಿಕೊಂಡಿದ್ದೆ. ನಾನು ಆಶ್ವಥ್ ಅವರ ದೊಡ್ಡ ಅಭಿಮಾನಿ. ಈ ಹಾಡಿನ ರೈಟ್ಸ್ ಲಹರಿ ಸಂಸ್ಥೆಗೆ ಒಳಪಟ್ಟಿದ್ದು ಎನ್ನುವುದು ತಿಳಿಯದೇ ಚಿತ್ರದಲ್ಲಿ ಬಳಸಿಕೊಂಡೆ ಅದಕ್ಕಾಗಿ ಲಹರಿ ಸಂಸ್ಥೆ ಮಾಲೀಕ ವೇಲು ಬಳಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ನಾಗೇಂದ್ರ ಪ್ರಸಾದ್ ಅಪಾಲಜಿ ಪತ್ರ ಕಳುಹಿಸಿದ್ದಾರೆ.
ತಕ್ಷಣ ದಿಂದಲೇ ಚಿತ್ರದಲ್ಲಿ ಈ ಹಾಡಿಗಾಗಿ ಲಹರಿ ಸಂಸ್ಥೆಗೆ ಕ್ರೆಡಿಟ್ ನೀಡುತ್ತೇನೆ. ವಿನಾಯಕ ಗೆಳೆಯರ ಬಳಗ ರಾಜ್ಯಾದ್ಯಂತ 35 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಮೊದಲ ವಾರದ ಗಳಿಕೆಯಿಂದ ಸಂತೋಷವಾಗಿದೆ.
ಒಂದು ಒಳ್ಳೆ ಚಿತ್ರ ನೀಡಿದ ಸಂತೃಪ್ತಿ ನಮ್ಮ ಚಿತ್ರತಂಡಕ್ಕೆ ಇದೆ. ಚಿತ್ರ ಇನ್ನೂ ಉತ್ತಮ ಪ್ರದರ್ಶನ ಕಾಣುವ ಆಶಾಭಾವ ಹೊಂದಿದ್ದೇನೆ ಎಂದು ನಾಗೇಂದ್ರ ಪ್ರಸಾದ್ ಸಂತೋಷ ವ್ಯಕ್ತ ಪಡಿಸಿದ್ದಾರೆ.