Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಲಿ ಚಿತ್ರತಂಡಮೇಲೆ ಕಿಡಿಗೇಡಿಗಳ ದಾಂಧಲೆ
ಕಿಶೋರ್ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಹುಲಿ' ಚಿತ್ರೀಕರಣದ ವೇಳೆ ಕಿಡಿಗೇಡಿಗಳು ದಾಂಧಲೆ ನಡೆಸಿದ ಘಟನೆ ಮೈಸೂರಿನ ದೊಡ್ಡಕೆರೆ ಆವರಣದಲ್ಲಿ ಮಂಗಳವಾರ(ಏ.20) ಮಟ ಮಟ ಮಧ್ಯಾಹ್ನ ನಡೆದಿದೆ. ಕಿಡಿಗೇಡಿಗಳು ಚಿತ್ರೀಕರಣದ ವಾಹನಗಳನ್ನು ಜಖಂಗೊಳಿಸಿದ್ದಾರೆ.
ಓಂಪ್ರಕಾಶ್ ರಾವ್ ನಿರ್ದೇಶನದ ಹುಲಿ ಚಿತ್ರೀಕರಣ ಅರಮನೆ ಆವರಣ ಎದುರಿನ ದೊಡ್ಡಕೆರೆ ಆವರಣದಲ್ಲಿ ಸಾಗುತ್ತಿತ್ತು. ಆ ಸಮಯದಲ್ಲಿ ಫುಟ್ಬಾಲ್ ಮೈದಾನದಲ್ಲಿ ಆಟವಾಡುತ್ತಿದ್ದ ಹುಡುಗರು ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಓಂ ಪ್ರಕಾಶ್ ರಾವ್ ಹಾಗೂ ಹುಡುಗರ ನಡುವೆ ಮಾತಿನ ಚಕಮಕಿ ನಡೆದಿದೆ.
ಚಿತ್ರತಂಡ ಹಾಗೂ ಹುಡುಗರ ನಡುವಿನ ವಾಗ್ವಾದ ವಿಕೋಪಕ್ಕೆ ಹೋಗಿ ಚಿತ್ರತಂಡದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದ ಪರಿಣಾಮ ಚಿತ್ರೀಕರಣಕ್ಕೆ ಬಳಸಲಾದ ಜನರೇಟರ್ ವಾಹನ, 2 ಟಾಟಾ ಸುಮೋ, 2 ಬೈಕ್ ಹಾಗೂ ನಾಯಕ ನಟ ಕಿಶೋರ್ ಅವರ ಕಾರು ಜಖಂಗೊಂಡಿದೆ.
ಸುದ್ದಿ ತಿಳಿದ ಮೈಸೂರು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಕಾಲಿಗೆ ಬುದ್ಧಿ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದ್ದು ಚಿತ್ರೀಕರಣ ನಡೆಯುತ್ತಿದೆ ಎಂದು ಕಿಶೋರ್ ತಿಳಿಸಿದ್ದಾರೆ. ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಚಿತ್ರೀಕರಣ ಮಾಡುವಾಗಲೂ ಹುಲಿ ಚಿತ್ರತಂಡ ವಿವಾದಕ್ಕೆ ಸಿಲುಕಿತ್ತು. ಈ ಘಟನೆ ಕಳೆದ ಮಂಗಳವಾರ ನಡೆದಿತ್ತು.
ಮೃಗಾಲಯದಲ್ಲಿನ ಹುಲಿಯನ್ನು ಚಿತ್ರೀಕರಣ ನಡೆಸಲು ಅನುಮತಿ ಪಡೆಯಲಾಗಿತ್ತು. ಮೃಗಾಲಯ ಸಿಬ್ಬಂದಿಯ ಎಚ್ಚರಿಕೆಯನ್ನು ಗಮನಿಸದೆ ಚಿತ್ರತಂಡ ಅತಿಯಾದ ಶಬ್ದ, ಬೆಳಕು ಜನರೇಟರ್ ಬಳಸಿ ಪ್ರಾಣಿಗಳು ಬೆದರುವಂತ ಮಾಡಿದ್ದರು. ಈ ಕಾರಣಕ್ಕೆ ಚಿತ್ರೀಕರಣ ಬಂದ್ ಮಾಡಲಾಗಿತ್ತು. ಚಿತ್ರದ ನಾಯಕಿ ಜೆನ್ನಿಫರ್ ಕೊತ್ವಾಲ್ ಇಂದಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.