Don't Miss!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು, ರವಿಚಂದ್ರನ್ ಜತೆ ರಾಧಿಕಾ ಅಭಿನಯಿಸಲಿಲ್ಲ ಯಾಕೆ?
ಪಾಲಿಟಿಷಿಯನ್ಗಳ ಪರಿಚಯವಾದ ಮೇಲೆ ತುಂಬಾ ಸುಧಾರಿಸಿಕೊಂಡಿದ್ದೇನೆ. ಯಾರಾದರೂ ಆವಾಜ್ ಹಾಕಿದರೆ ಗಂಟಲು ಹಿಡಿದಿಡುವಷ್ಟು ಶಕ್ತಿ ಬಂದಿದೆ..." ಎಂದು ಹೇಳುತ್ತಾ ಒಮ್ಮೆ ನಾಲಿಗೆಯನ್ನು ಬಿಗಿಯಾಗಿ ತುಟಿಗಳೆಡೆಯಲ್ಲಿ ಬಂಧಿಸಿದರು. ಮತ್ತು ಮುಂದುವರಿದರು: ಈಗ ಅಂಥಾದ್ದೇನಿಲ್ಲ. ಹೆದರಿದರೆ ಹೆದರಿಸುತ್ತಾರೆ, ಹೆದಸಿದರೆ ಹೆದರುತ್ತಾರೆ. ಲೋಕ ಹೀಗಿದೆ. ಹಾಗೆ ಹೆದರಿಸುವವನೇ ಸತ್ತು ಹೋದನಲ್ಲಾ? ಅವನ ಛೇಲಾಗಳ ಬಾಯಿಯೂ ಕಟ್ಟಿ ಹೋಯಿತು..." ಎಂದು ಮಾತು ನಿಲ್ಲಿಸಿ ಮತ್ತೆ ಅಸಹ್ಯದ ಮುಖ ಮಾಡಿಕೊಂಡು ಥೂ ಅಂದರು. ಪಕ್ಕವಾದ್ಯ ಛೀ ಅಂದಿತು!
ತಂಗಾಳಿ ಬೀಸುತ್ತಿತ್ತು. ಎದುರು ಜಲರಾಶಿ. ಸುತ್ತಲೂ ತೆಂಗಿನ ಮರಗಳ ಸಾಲು. ಅದು ಕೇರಳವೆನ್ನಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕು? ನೀಲೇಶ್ವರದ ಬೋಟ್ಹೌಸ್ನ ಮುಂದಿರುವ ಆಫೀಸಿನ ಹಜಾರದಲ್ಲಿ ದಂಪತಿಗಳು ಕುಳಿತಿದ್ದರು. ಬೆಂಗಳೂರಿನ ಧಗೆಯಿಂದ ಪಾರಾಗಿ ಕರಾವಳಿಯ ಕುಳಿರ್ಗಾಳಿಗೆ ಮೈಯೊಡ್ಡಿದ್ದರು.
ಸಲ್ವಾರ್ ಕಮೀಜ್ ಧರಿಸಿದ ಸುರೇಖಾ ಮತ್ತು ಕೆ ಜಿ ಗಟ್ಟಲೆ ಬಂಗಾರದ ಆಭರಣ ಧರಿಸಿದ್ದ ನಲವತ್ತರ ಹರೆಯದ ದೇವರಾಜ್ ಸಮಸ್ಯೆಯ ಮತ್ತೊಂದು ಮುಖವನ್ನು ನಮ್ಮ ಮುಂದೆ ಹರಡಿದ್ದು ಹೀಗೆ: "ಹೊಸಬರ ಜತೆ ನಟಿಸುತ್ತಿರುವ ನಮ್ಮ ರಾಧಿಕಾ ಹೆಸರು ಮಾಡಿದವರ ಜತೆ ಅಭಿನಯಿಸಬೇಕೆಂಬ ಆಸೆಯಿತ್ತು. ಹೀಗೆ ಯೋಚಿಸುತ್ತಿರುವಂತೆಯೇ ವಿಷ್ಣು ಸಾರ್ ಕಡೆಯಿಂದ ಫೋನ್ ಬಂತು..."