Don't Miss!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೀರ ಮದಕರಿ ನಿರ್ಮಾಪಕ ದಿನೇಶ್ ಗಾಂಧಿ ಬಂಧನ
ಚೆಕ್ ಬೌನ್ಸ್ ಕೇಸ್ ಗೆ ಸಂಬಂಧಿಸಿದಂತೆ ಕನ್ನಡ ಚಿತ್ರನಿರ್ಮಾಪಕ ದಿನೇಶ್ ಗಾಂಧಿ ಅವರನ್ನು ಸಂಜಯನಗರ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ. ಈ ಸಂಬಂಧ ರವಿ ಎಂಬುವವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿಂದೆ ಕೋರ್ಟ್ ಗೆ ಹಾಜರಾಗುವಂತೆ ದಿನೇಶ್ ಗಾಂಧಿಗೆ ನ್ಯಾಯಾಲಯ ನೋಟೀಸ್ ಜಾರಿ ಮಾಡಿತ್ತು. ಆದರೆ ದಿನೇಶ್ ಗಾಂಧಿ ಅವರು ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಪ್ರಕರಣದಲ್ಲಿ ದಿನೇಶ್ ಗಾಂಧಿ ಅವರು ನೇರವಾಗಿ ಭಾಗಿಯಲ್ಲದಿದ್ದರೂ ಅವರ ಸ್ನೇಹಿತ ಚಂದ್ರಶೇಖರ್ ಎಂಬುವವರಿಗೆ ರವಿ ಮೂಲಕ ಹಣ ಕೊಡಿಸಿದ್ದರು. ಸೆಕ್ಯುರಿಟಿಯಾಗಿ ದಿನೇಶ್ ಗಾಂಧಿ ಸಹಿ ಹಾಕಿದ್ದರು.
ಚಂದ್ರಶೇಖರ್ ಕಾರಣಾಂತರಗಳಿಂದ ರವಿಗೆ ಹಣಹಿಂತಿರುಗಿಸಲಿಲ್ಲ. ರವಿ ವಿಧಿ ಇಲ್ಲದೆ ದಿನೇಶ್ ಗಾಂಧಿಗೆ ದುಂಬಾಲು ಬಿದ್ದರು. ದಿನೇಶ್ ಗಾಂಧಿ ಕೊಟ್ಟಿದ್ದ ಚೆಕ್ ಬೌನ್ಸ್ ಆಗಿದೆ ಎನ್ನಲಾಗಿದೆ. ಈ ಸಂಬಂಧ ರವಿ ಅವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರವಿ ಅವರಿಗೆ ಸುಮಾರು ರು.4ಲಕ್ಷ ಹಣ ಕೊಡಬೇಕಾಗಿದೆ ಎನ್ನುತ್ತವೆ ಮೂಲಗಳು.
ಸಂಜಯನಗರ ಪೊಲೀಸರು 24ಗಂಟೆಯಲ್ಲಿ ದಿನೇಶ್ ಗಾಂಧಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಬೇಕಾಗಿದೆ.ಸದ್ಯಕ್ಕೆ ಅವರನ್ನು ಸಂಜಯನಗರ ಪೊಲೀಸ್ ಠಾಣೆಯಲ್ಲಿಡದೆ ಗುಪ್ತ ಸ್ಥಳದಲ್ಲಿ ಇಡಲಾಗಿದೆ ಎಂದು ಕನ್ನಡಟಿವಿ ವಾಹಿನಿಗಳು ವರದಿ ಮಾಡಿವೆ. ದಿನೇಶ್ ಗಾಂಧಿ ವೀರ ಮದಕರಿ ಚಿತ್ರವನ್ನು ನಿರ್ಮಿಸಿದ್ದರು. ಪ್ರಸ್ತುತ ಅವರು ರವಿಚಂದ್ರನ್ ನಾಯಕ ನಟನಾಗಿ 'ಹೂ' ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)