Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳ ಸೋಲಿಗೆ ಕೆಎಫ್ ಸಿಸಿಯೂ ಕಾರಣವಾಗಿದೆ; ಎಚ್ಡಿಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೀತಿ ನಿಯಮಗಳ ಬಗ್ಗೆ ಎಚ್ಡಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡಳಿ ತನಗೆ ಹೇಗೆ ಬೇಕೋ ಹಾಗೆ ನೀತಿ ನಿಯಮಗಳನ್ನು ರೂಪಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ. ಮಂಡಳಿ ನಿರ್ಧಾರಗಳು ಕನ್ನಡ ಚಿತ್ರಗಳ ಸೋಲಿಗೆ ಕಾರಣವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
'ಪ್ರೀತಿಯ ಲೋಕ' ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು. ಪೈರಸಿಯನ್ನು ತಡೆಯಲು ಗೂಂಡಾ ಕಾಯಿದೆ ಜಾರಿಗೆ ಬಂದರೆ ನಕಲಿ ಹಾವಳಿ ಕಡಿಮೆಯಾಗಲಿದೆ. ತಾವು ಮುಖ್ಯಮಂತ್ರಿಗಳಾಗಿದ್ದಾಗ ಗೂಂಡಾ ಕಾಯಿದೆಯನ್ನು ರೂಪಿಸಲಾಗಿತ್ತು ಎಂದರು.
ಚಿತ್ರರಂಗದಲ್ಲಿನ ಪೈರಸಿಯನ್ನು ತಡೆಯಲು ರೂಪಿಸಿರುವ ಗೂಂಡಾ ವಿರೋಧಿ ಕಾಯಿದೆಗೆ ಅಂಕಿತ ಹಾಕಿಸಲು ಖುದ್ದು ರಾಷ್ಟ್ರಪತಿ ಪ್ರತಿಭಾ ಪಾಟೀಲರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು. ನಕಲಿ ಹಾವಳಿಯಿಂದ ಕನ್ನಡ ಚಿತ್ರರಂಗಕ್ಕೆ ಭಾರಿ ನಷ್ಟ ಉಂಟಾಗುತ್ತಿದೆ.
ಪೈರಸಿಯಿಂದ ಕನ್ನಡ ನಿರ್ಮಾಪಕರಿಗೆ ಹಾಗೂ ಆಡಿಯೋ ಕಂಪನಿಗಳಿಗೆ ತೀವ್ರ ನಷ್ಟ ಉಂಟಾಗುತ್ತಿದೆ. ಈ ಸಂಬಂಧ ಶೀಘ್ರದಲ್ಲೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಪೈರಸಿ ತಡೆ ಕಾಯಿದೆಗೆ ಅಂಕಿತ ಹಾಕಿಸಲು ಮನವಿ ಮಾಡುವುದಾಗಿ ಅವರು ಹೇಳಿದರು.