Don't Miss!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳ ಸೋಲಿಗೆ ಕೆಎಫ್ ಸಿಸಿಯೂ ಕಾರಣವಾಗಿದೆ; ಎಚ್ಡಿಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೀತಿ ನಿಯಮಗಳ ಬಗ್ಗೆ ಎಚ್ಡಿಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡಳಿ ತನಗೆ ಹೇಗೆ ಬೇಕೋ ಹಾಗೆ ನೀತಿ ನಿಯಮಗಳನ್ನು ರೂಪಿಸಿಕೊಳ್ಳುವುದು ಸರಿಯಾದ ಕ್ರಮವಲ್ಲ. ಮಂಡಳಿ ನಿರ್ಧಾರಗಳು ಕನ್ನಡ ಚಿತ್ರಗಳ ಸೋಲಿಗೆ ಕಾರಣವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
'ಪ್ರೀತಿಯ ಲೋಕ' ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು. ಪೈರಸಿಯನ್ನು ತಡೆಯಲು ಗೂಂಡಾ ಕಾಯಿದೆ ಜಾರಿಗೆ ಬಂದರೆ ನಕಲಿ ಹಾವಳಿ ಕಡಿಮೆಯಾಗಲಿದೆ. ತಾವು ಮುಖ್ಯಮಂತ್ರಿಗಳಾಗಿದ್ದಾಗ ಗೂಂಡಾ ಕಾಯಿದೆಯನ್ನು ರೂಪಿಸಲಾಗಿತ್ತು ಎಂದರು.
ಚಿತ್ರರಂಗದಲ್ಲಿನ ಪೈರಸಿಯನ್ನು ತಡೆಯಲು ರೂಪಿಸಿರುವ ಗೂಂಡಾ ವಿರೋಧಿ ಕಾಯಿದೆಗೆ ಅಂಕಿತ ಹಾಕಿಸಲು ಖುದ್ದು ರಾಷ್ಟ್ರಪತಿ ಪ್ರತಿಭಾ ಪಾಟೀಲರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು. ನಕಲಿ ಹಾವಳಿಯಿಂದ ಕನ್ನಡ ಚಿತ್ರರಂಗಕ್ಕೆ ಭಾರಿ ನಷ್ಟ ಉಂಟಾಗುತ್ತಿದೆ.
ಪೈರಸಿಯಿಂದ ಕನ್ನಡ ನಿರ್ಮಾಪಕರಿಗೆ ಹಾಗೂ ಆಡಿಯೋ ಕಂಪನಿಗಳಿಗೆ ತೀವ್ರ ನಷ್ಟ ಉಂಟಾಗುತ್ತಿದೆ. ಈ ಸಂಬಂಧ ಶೀಘ್ರದಲ್ಲೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಪೈರಸಿ ತಡೆ ಕಾಯಿದೆಗೆ ಅಂಕಿತ ಹಾಕಿಸಲು ಮನವಿ ಮಾಡುವುದಾಗಿ ಅವರು ಹೇಳಿದರು.