Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಬಿಕ್ಕಟ್ಟು ಸಂಧಾನಕ್ಕೆ ಎಸ್ಐಎಫ್ಸಿಸಿ
ಬೆಂಗಳೂರು : ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿರುವ ಏಳು ವಾರಗಳ ನಿರ್ಬಂಧವನ್ನು ತೆಗೆದುಹಾಕುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಯ ಜತೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ( ಎಸ್ಐಎಫ್ಸಿಸಿ) ಸಂಧಾನ ನಡೆಸಲು ಉದ್ದೇಶಿಸಿದೆ.
ಕೆಎಫ್ಸಿಸಿಗೆ ಚುನಾವಣೆ ನಡೆದ ನಂತರ ರಾಜ್ಯದಲ್ಲಿ ಪರಭಾಷಾ ಚಲನಚಿತ್ರಗಳ ಬಿಡುಗಡೆ ಕುರಿತಂತೆ ಮಾತುಕತೆ ನಡೆಸಲಿದ್ದೇವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಕದ ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿಗಳ ಜತೆ ಹಾಗೂ ಬಾಲಿವುಡ್ನ ಪ್ರಮುಖರೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಎಂದು ಎಸ್ಎಎಫ್ಸಿಸಿ ಅಧ್ಯಕ್ಷ ದೇವಿಪ್ರಸಾದ್ ಚೆನ್ನೈಯಲ್ಲಿ ತಿಳಿಸಿದ್ದಾರೆ.
ಪರಭಾಷೆಯ ಚಿತ್ರಗಳು ಬಿಡುಗಡೆಯಾದ ಏಳು ವಾರಗಳ ನಂತರವೇ ರಾಜ್ಯದಲ್ಲಿ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರ ವಿಧಿಸಿದ ನಿರ್ಬಂಧದ ಹಿನ್ನೆಲೆಯಲ್ಲಿ ಭಾರತೀಯ ಚಲನಚಿತ್ರ ಒಕ್ಕೂಟ (ಎಫ್ಎಫ್ಐ) ಯಾವುದೇ ಕ್ರಮವನ್ನು ಕೈಗೊಳ್ಳುವುದಿಲ್ಲ ಎಂದು ಹೇಳಿದೆ.
ಕರ್ನಾಟಕ ಸರ್ಕಾರದ ನಿರ್ಣಯದ ಬಗ್ಗೆಯಾಗಲೀ, ಎಫ್ಐಎಫ್ಸಿಸಿ ತೆಗೆದುಕೊಳ್ಳುವ ನಿರ್ಣಯದ ಬಗ್ಗೆಯೂ ಆಗಲಿ ನಾವು ಯಾವುದೇ ರೀತಿಯಲ್ಲಿಯೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಎಫ್ಎಫ್ಐ ಅಧ್ಯಕ್ಷ ಸಂತೋಷ್ ಕುಮಾರ್ ಜೈನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್