Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾರ್ವತಮ್ಮಗೆ ಅಪ್ರಯೋಜಕ ಡಿಡಿ ನೀಡಿದ ಸರಕಾರ
ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿ ಗಳಿಸಿರುವ ಪಾರ್ವತಮ್ಮ ರಾಜಕುಮಾರ್ ಗೆ ನಮ್ಮ ಘನ ಸರಕಾರ 'ಅವಧಿ ಮುಗಿದ ಡಿಡಿ' ನೀಡಿ ಆವಾಂತರ ಮಾಡಿಕೊಂಡಿದೆ. ಕಿತ್ತೂರುರಾಣಿ ಚನ್ನಮ್ಮ ಪ್ರಶಸ್ತಿಯ ನಗದು ಬಹುಮಾನ ಹತ್ತು ಸಾವಿರ ರೂಪಾಯಿಗಳ ಡಿಡಿಯನ್ನು ಸಂಬಂಧಿಸಿದ ಅಧಿಕಾರಿಗಳು ಪಾರ್ವತಮ್ಮ ಅವರ ಮನೆಗೆ ತೆರಳಿ ಶನಿವಾರದಂದು ಹಸ್ತಾಂತರಿಸಿ ತಕ್ಷಣವೇ ನಗದುಗೊಳಿಸಬಹುದು ಎಂದು ಹೇಳಿದ್ದಾರೆ.
ಡಿಡಿ ಪಡೆದು ಬ್ಯಾಂಕಿಗೆ ಹೋದ ಪಾರ್ವತಮ್ಮಗೆ ಇದು ಅವಧಿ ಮುಗಿದಿರುವ ಡಿಡಿ ಆಗಿರುವುದರಿಂದ ಇದನ್ನು ಸ್ವೀಕರಿಸಲಾಗುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ. ಇದರಿಂದ ಅವಮಾನಗೊಂಡ ಪಾರ್ವತಮ್ಮ ಸರಕಾರ ನಡೆಸುವ ಯಾವುದೇ ಸಭೆ ಸಮಾರಂಭಗಳಿಗೆ ಇನ್ನು ಮುಂದೆ ತಾನು ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ.
ಕೆಚ್ಚೆದೆಯ ರಾಣಿ 'ಕಿತ್ತೂರು ಚನ್ನಮ್ಮ' ಹೆಸರಿನಲ್ಲಿ ನೀಡುವ ಈ ಪ್ರಶಸ್ತಿಯನ್ನು ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದಂದು ನೀಡುವುದು ವಾಡಿಕೆ. ಆದರೆ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸರಕಾರ ಈ ಕಾರ್ಯಕ್ರಮವನ್ನು ಮುಂದೂಡಿತ್ತು. ಪ್ರಶಸ್ತಿ ಮಾತ್ರ ಘೋಷಿಸಿದ್ದ ಸರಕಾರ ಕಾರ್ಯಕ್ರಮ ಆಯೋಜಿಸುವುದನ್ನು ಮರೆತಿತ್ತು, ಜೂನ್ 21 ರಂದು ತಮ್ಮ ತಪ್ಪಿನ ಅರಿವಾದ ಸರಕಾರ ಎಚ್ಚೆತ್ತು ಈ ಅವಧಿ ಮುಗಿದ ಡಿಡಿ ನೀಡಿ ಇನ್ನೊದು ಆವಾಂತರ ಸೃಷ್ಟಿಸಿಕೊಂಡಿದೆ.
(ದಟ್ಸ್ ಕನ್ನಡ ಸಿನಿಮಾ ವಾರ್ತೆ)