Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈಕೋರ್ಟ್ ಮೆಟ್ಟಿಲೇರಿದ 'ರಾವಣ್' ರಾಮಾಯಣ
'ರಾವಣ್' ಚಿತ್ರದ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತೆ ತೊಡೆ ತಟ್ಟಿದೆ. ಛಲ ಬಿಡದ ತ್ರಿವಿಕ್ರಮನಂತೆ ಈ ಬಾರಿ ಹೈಕೋರ್ಟ್ ಮೆಟ್ಟಿಲೇರಿದೆ. ಒಟ್ಟಿನಲ್ಲಿ ರಾವಣನಿಗೆ ಮಣ್ಣುಮುಕ್ಕಿಸುವ ತನಕ ನಿದ್ದೆ ಮಾಡುವುದಿಲ್ಲ ಎಂದು ಮಂಡಳಿ ತೀರ್ಮಾನಿಸಿದಂತಿದೆ.
ರಾಜ್ಯದಲ್ಲಿ 'ರಾವಣ್' ಚಿತ್ರಕ್ಕೆ ಸಂಬಂಧಿಸಿದಂತೆ ಮಂಡಳಿ ಮತ್ತು ರಿಲಯನ್ಸ್ ಬಿಗ್ ಪಿಕ್ಚರ್ಸ್ ನಡುವಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ರಾಜ್ಯದಲ್ಲಿ ರಾವಣ್ ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ದೆಹಲಿಯ ಸ್ಪರ್ಧಾ ಆಯೋಗ ನೀಡಿದ್ದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಕೆಎಫ್ ಸಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿ ಆನಂದಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.
ರಾವಣ್ ಬಿಡುಗಡೆಗೆ ಸಂಬಂಧಿಸಿದಂತೆ ಕೇವಿಯಟ್ ಸಲ್ಲಿಸಿದ್ದರೂ ಸ್ಪರ್ಧಾ ಆಯೋಗ ಅದನ್ನು ಪರಿಗಣಿಸದೆ ಬಿಗ್ ಪಿಕ್ಚರ್ಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿತ್ತು. ಇದರಿಂದ 24 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾವಣ್ ಚಿತ್ರ 36 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಎಂದು ಮಂಡಳಿ ತನ್ನ ದೂರಿನಲ್ಲಿ ತಿಳಿಸಿದೆ.
ಈ ಹಿಂದೆ ಕೈಟ್ಸ್ ಚಿತ್ರ ಬಿಡುಗಡೆ ಸಂದರ್ಭದಲ್ಲಿ 24 ಚಿತ್ರಮಂದಿರಗಳಲ್ಲಿ ಮಾತ್ರ ಬಿಡುಗಡೆ ಮಾಡುವುದಾಗಿ ರಿಲಯನ್ಸ್ ಬಿಗ್ ಪಿಕ್ಚರ್ಸ್ ಮುಚ್ಚಳಿಕೆ ಬರೆದುಕೊಟ್ಟಿತ್ತು. ಇದೀಗ ಮುಚ್ಚಳಿಕೆ ವಿರುದ್ಧವಾಗಿ ಸ್ಪರ್ಧಾ ಆಯೋಗಕ್ಕೆ ರಿಲಯನ್ಸ್ ಬಿಗ್ ಪಿಕ್ಚರ್ಸ್ ದೂರು ಸಲ್ಲಿಸಿದೆ. ಆಯೋಗದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮಂಡಳಿ ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದೆ.