Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂಗೊಳ್ಳಿ ರಾಯಣ್ಣನಿಗೆ ಕೈಕೊಟ್ಟ ಪ್ರಿಯಾಮಣಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸಲಿರುವ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'. ಈ ಚಿತ್ರ ನವೆಂಬರ್ ನಲ್ಲಿ ಸೆಟ್ಟೇರಲಿದೆ. ಆದರೆ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಮಣಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ 'ಸಂಗೊಳ್ಳಿ ರಾಯಣ್ಣ'ನನ್ನು ಪ್ರಿಯಾಮಣಿ ಒಲ್ಲೆ ಎಂದಿದ್ದಾರೆ.
ಈ ಸುದ್ದಿಯನ್ನು ಸ್ವತಃ ಚಿತ್ರದ ನಿರ್ದೇಶಕ ನಾಗಣ್ಣ ಬಹಿರಂಗಪಡಿಸಿದ್ದಾರೆ. ಪ್ರಿಯಾಮಣಿ ಅವರ ಈ ನಿರ್ಧಾರ ತಮ್ಮನ್ನು ಚಕಿತಗೊಳಿಸಿದೆ ಎಂದು ನಾಗಣ್ಣ ಪ್ರತಿಕ್ರಿಯಿಸಿದ್ದಾರೆ. ಭಾರಿ ಬಜೆಟ್ನ ಈ ಚಿತ್ರದಲ್ಲಿ ಪ್ರಿಯಾಮಣಿ ನಟಿಸಲು ಆರಂಭದಲ್ಲಿ ಆಸಕ್ತಿ ತೋರಿಸಿದ್ದರು. ಮುಂಗಡ ಹಣ ಕೊಡುವುದಾಗಿ ಪ್ರಿಯಾಮಣಿ ಅವರ ಬೆಂಗಳೂರು ನಿವಾಸಕ್ಕೆ ದೂರವಾಣಿ ಮೂಲಕ ತಿಳಿಸಿದೆವು. ಆಕೆಯ ಮ್ಯಾನೇಜರ್ ಪ್ರಿಯಾಮಣಿ ಅವರಿಗೆ ಈ ಚಿತ್ರದಲ್ಲಿ ನಟಿಸಲು ಆಸಕ್ತಿ ಇಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಪ್ರಿಯಾಮಣಿ ಜಾಗಕ್ಕೆ ಹೊಸಬರನ್ನು ಕರೆತರುವ ಬಗ್ಗೆ ಚಿಂತನೆ ನಡೆದಿದೆ. ಪ್ರಿಯಾಮಣಿ ಅವರು ಇದ್ದಕ್ಕಿಂದ್ದಂತೆ ಸಂಗೊಳ್ಳಿ ರಾಯಣ್ಣನ ಕೈಬಿಟ್ಟಿದ್ದು ಏಕೆ ಎಂದು ತಿಳಿದುಬಂದಿಲ್ಲ. ನವೆಂಬರ್ 19ರಿಂದ ಚಿತ್ರೀಕರಣ ಆರಂಭವಾಗಲಿರುವ ಈ ಚಿತ್ರದಲ್ಲಿ ಅಭಿನೇತ್ರಿ ಜಯಪ್ರದಾ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರದಲ್ಲಿ ಕಾಣಿಸಲಿದ್ದಾರೆ.