Don't Miss!
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೊಳ್ಳಿ ರಾಯಣ್ಣನಿಗೆ ಕೈಕೊಟ್ಟ ಪ್ರಿಯಾಮಣಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸಲಿರುವ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'. ಈ ಚಿತ್ರ ನವೆಂಬರ್ ನಲ್ಲಿ ಸೆಟ್ಟೇರಲಿದೆ. ಆದರೆ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಮಣಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ 'ಸಂಗೊಳ್ಳಿ ರಾಯಣ್ಣ'ನನ್ನು ಪ್ರಿಯಾಮಣಿ ಒಲ್ಲೆ ಎಂದಿದ್ದಾರೆ.
ಈ ಸುದ್ದಿಯನ್ನು ಸ್ವತಃ ಚಿತ್ರದ ನಿರ್ದೇಶಕ ನಾಗಣ್ಣ ಬಹಿರಂಗಪಡಿಸಿದ್ದಾರೆ. ಪ್ರಿಯಾಮಣಿ ಅವರ ಈ ನಿರ್ಧಾರ ತಮ್ಮನ್ನು ಚಕಿತಗೊಳಿಸಿದೆ ಎಂದು ನಾಗಣ್ಣ ಪ್ರತಿಕ್ರಿಯಿಸಿದ್ದಾರೆ. ಭಾರಿ ಬಜೆಟ್ನ ಈ ಚಿತ್ರದಲ್ಲಿ ಪ್ರಿಯಾಮಣಿ ನಟಿಸಲು ಆರಂಭದಲ್ಲಿ ಆಸಕ್ತಿ ತೋರಿಸಿದ್ದರು. ಮುಂಗಡ ಹಣ ಕೊಡುವುದಾಗಿ ಪ್ರಿಯಾಮಣಿ ಅವರ ಬೆಂಗಳೂರು ನಿವಾಸಕ್ಕೆ ದೂರವಾಣಿ ಮೂಲಕ ತಿಳಿಸಿದೆವು. ಆಕೆಯ ಮ್ಯಾನೇಜರ್ ಪ್ರಿಯಾಮಣಿ ಅವರಿಗೆ ಈ ಚಿತ್ರದಲ್ಲಿ ನಟಿಸಲು ಆಸಕ್ತಿ ಇಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಪ್ರಿಯಾಮಣಿ ಜಾಗಕ್ಕೆ ಹೊಸಬರನ್ನು ಕರೆತರುವ ಬಗ್ಗೆ ಚಿಂತನೆ ನಡೆದಿದೆ. ಪ್ರಿಯಾಮಣಿ ಅವರು ಇದ್ದಕ್ಕಿಂದ್ದಂತೆ ಸಂಗೊಳ್ಳಿ ರಾಯಣ್ಣನ ಕೈಬಿಟ್ಟಿದ್ದು ಏಕೆ ಎಂದು ತಿಳಿದುಬಂದಿಲ್ಲ. ನವೆಂಬರ್ 19ರಿಂದ ಚಿತ್ರೀಕರಣ ಆರಂಭವಾಗಲಿರುವ ಈ ಚಿತ್ರದಲ್ಲಿ ಅಭಿನೇತ್ರಿ ಜಯಪ್ರದಾ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರದಲ್ಲಿ ಕಾಣಿಸಲಿದ್ದಾರೆ.