Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೊಳ್ಳಿ ರಾಯಣ್ಣನಿಗೆ ಕೈಕೊಟ್ಟ ಪ್ರಿಯಾಮಣಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ನಟನಾಗಿ ಅಭಿನಯಿಸಲಿರುವ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ'. ಈ ಚಿತ್ರ ನವೆಂಬರ್ ನಲ್ಲಿ ಸೆಟ್ಟೇರಲಿದೆ. ಆದರೆ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಮಣಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ 'ಸಂಗೊಳ್ಳಿ ರಾಯಣ್ಣ'ನನ್ನು ಪ್ರಿಯಾಮಣಿ ಒಲ್ಲೆ ಎಂದಿದ್ದಾರೆ.
ಈ ಸುದ್ದಿಯನ್ನು ಸ್ವತಃ ಚಿತ್ರದ ನಿರ್ದೇಶಕ ನಾಗಣ್ಣ ಬಹಿರಂಗಪಡಿಸಿದ್ದಾರೆ. ಪ್ರಿಯಾಮಣಿ ಅವರ ಈ ನಿರ್ಧಾರ ತಮ್ಮನ್ನು ಚಕಿತಗೊಳಿಸಿದೆ ಎಂದು ನಾಗಣ್ಣ ಪ್ರತಿಕ್ರಿಯಿಸಿದ್ದಾರೆ. ಭಾರಿ ಬಜೆಟ್ನ ಈ ಚಿತ್ರದಲ್ಲಿ ಪ್ರಿಯಾಮಣಿ ನಟಿಸಲು ಆರಂಭದಲ್ಲಿ ಆಸಕ್ತಿ ತೋರಿಸಿದ್ದರು. ಮುಂಗಡ ಹಣ ಕೊಡುವುದಾಗಿ ಪ್ರಿಯಾಮಣಿ ಅವರ ಬೆಂಗಳೂರು ನಿವಾಸಕ್ಕೆ ದೂರವಾಣಿ ಮೂಲಕ ತಿಳಿಸಿದೆವು. ಆಕೆಯ ಮ್ಯಾನೇಜರ್ ಪ್ರಿಯಾಮಣಿ ಅವರಿಗೆ ಈ ಚಿತ್ರದಲ್ಲಿ ನಟಿಸಲು ಆಸಕ್ತಿ ಇಲ್ಲ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಪ್ರಿಯಾಮಣಿ ಜಾಗಕ್ಕೆ ಹೊಸಬರನ್ನು ಕರೆತರುವ ಬಗ್ಗೆ ಚಿಂತನೆ ನಡೆದಿದೆ. ಪ್ರಿಯಾಮಣಿ ಅವರು ಇದ್ದಕ್ಕಿಂದ್ದಂತೆ ಸಂಗೊಳ್ಳಿ ರಾಯಣ್ಣನ ಕೈಬಿಟ್ಟಿದ್ದು ಏಕೆ ಎಂದು ತಿಳಿದುಬಂದಿಲ್ಲ. ನವೆಂಬರ್ 19ರಿಂದ ಚಿತ್ರೀಕರಣ ಆರಂಭವಾಗಲಿರುವ ಈ ಚಿತ್ರದಲ್ಲಿ ಅಭಿನೇತ್ರಿ ಜಯಪ್ರದಾ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರದಲ್ಲಿ ಕಾಣಿಸಲಿದ್ದಾರೆ.