Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.25ರಿಂದ ಗೋಕಾಕ್ ಭಾಗ-2 ; ರಾಜ್-ವಿಷ್ಣು ನೇತೃತ್ವದಲ್ಲಿ ಚಳವಳಿ
ಬೆಂಗಳೂರು : ಚಿತ್ರೋದ್ಯಮದ ಬಿಕ್ಕಟ್ಟು ಈಗ ತೀವ್ರ ಸ್ವರೂಪವನ್ನು ಪಡೆದಿದೆ. ನವೆಂಬರ್25 ರಿಂದ ಡಾ.ರಾಜ್ಕುಮಾರ್ ನೇತೃತ್ವದಲ್ಲಿ ಅನಿರ್ದಿಷ್ಟ ಕಾಲ ಧರಣಿ ಹಾಗೂ ಬಂದ್ ನಡೆಸಲು ಚಿತ್ರೋದ್ಯಮ ಮುಂದಾಗಿದೆ.
ನ. 25ರಂದು ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಧರಣಿ ಹಮ್ಮಿಕೊಳ್ಳಲಾಗಿದ್ದು, ಚಿತ್ರೋದ್ಯಮದ ಸಂಪೂರ್ಣ ಚಟುವಟಿಕೆಗಳು ಅಂದಿನಿಂದ ಸ್ಥಗಿತಗೊಳ್ಳಲಿದೆ. ಇದೇ ವೇಳೆಯಲ್ಲಿ ಮೂರು ವಾರಗಳ ಒಪ್ಪಂದ ಉಲ್ಲಂಘಿಸಿ ಕನ್ನಡೇತರ ಚಿತ್ರ ಪ್ರದರ್ಶಿಸುತ್ತಿರುವ ಚಿತ್ರಮಂದಿರಗಳಿಗೆ ಮುತ್ತಿಗೆ ಹಾಕಲಾಗುವುದು. ರಾಜ್ ಸೇರಿದಂತೆ ಎಲ್ಲ ನಟರೂ ಬಂಧನಕ್ಕೆ ಸಿದ್ಧರಾಗಿದ್ದಾರೆ ಎಂದು ಕನ್ನಡ ಚಿತ್ರೋದ್ಯಮ ಕ್ರಿಯಾ ಸಮಿತಿ ಅಧ್ಯಕ್ಷ ಹಾಗೂ ನಟ ಅಶೋಕ್ ತಿಳಿಸಿದ್ದಾರೆ.
ಚಿತ್ರೋದ್ಯಮ ತನ್ನ ಹೋರಾಟದಲ್ಲಿ ಕಾವೇರಿ ಸಮಸ್ಯೆ, ಕನ್ನಡ ಅನುಷ್ಠಾನ ಮತ್ತಿತರ ನಾಡು ನುಡಿಗೆ ಪೂರಕವಾಗಿರುವ ವಿಚಾರಗಳನ್ನು ಸಹಾ ಕೈಗೆತ್ತಿಗೊಂಡಿದೆ. ಸಾಹಿತಿಗಳು, ಕಲಾವಿದರು, ಕರುನಾಡ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ, ರೈತ ಸಂಘ ಮತ್ತಿತರ ಸಂಘಟನೆಗಳು ಪ್ರತಿಭಟನೆಯನ್ನು ಬೆಂಬಲಿಸಿವೆ.
ಪರಭಾಷಾ ಚಿತ್ರಗಳ ಬಿಡುಗಡೆಗೆ ವಿಧಿಸಿರುವ ಮೂರು ವಾರಗಳ ನಿರ್ಬಂಧವನ್ನು ಕಾನೂನಾಗಿ ಪರಿವರ್ತಿಸಬೇಕು. ಸದ್ಯದ ಒಪ್ಪಂದವನ್ನು ಗಾಳಿಗೆ ತೂರಿ ಹೊಸ ಪರಭಾಷಾ ಚಿತ್ರಗಳನ್ನು ಪ್ರದರ್ಶಿಸುತ್ತಿರುವ ಚಿತ್ರಮಂದಿರಗಳ ಪರವಾನಗಿಯನ್ನು ರದ್ದುಪಡಿಸಬೇಕು. ಪರಭಾಷಾ ಚಿತ್ರಗಳ ಪ್ರದರ್ಶನವನ್ನು ಕೂಡಲೇ ನಿಲ್ಲಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದಿಡಲು ನಿರ್ಧರಿಸಲಾಗಿದೆ.
ಈ ಸಂಬಂಧ ನಡೆದ ಚಿತ್ರೋದ್ಯಮದ ಸಭೆಯಲ್ಲಿ ಪಾರ್ವತಮ್ಮ ರಾಜ್ಕುಮಾರ್, ವಿಷ್ಣುವರ್ಧನ್, ಮುಖ್ಯಮಂತ್ರಿ ಚಂದ್ರು, ಅಶೋಕ್, ಎಸ್. ವಿ.ರಾಜೇಂದ್ರ ಸಿಂಗ್ ಬಾಬು, ನಾಗಾಭರಣ, ಬಸಂತ್ ಕುಮಾರ್ ಪಾಟೀಲ್, ಅಂಬರೀಷ್, ರವಿಚಂದ್ರನ್ ಮತ್ತಿತರರು ಪಾಲ್ಗೊಂಡಿದ್ದರು.
ನಮ್ಮ ದಾರಿ ನಮ್ಮದು : ಪ್ರತಿರೋಧಕ್ಕೆ ಸೊಪ್ಪು ಹಾಕದ ಪ್ರದರ್ಶಕರು ವೀರ್ಝಾರಾ ಬೆನ್ನಲ್ಲಿಯೇ ಹಿಂದಿಯ ಹಲ್ ಚಲ್ ಹಾಗೂ ತಮಿಳಿನ ಮನ್ಮಥನ್ ಚಿತ್ರವನ್ನು ನಗರದ ವಿವಿಧ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲು ಸಜ್ಜಾಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್