Don't Miss!
- News ನೇಹಾ ಹಿರೇಮಠ್ ಹತ್ಯೆ; ಕಾಣದ ಕೈಗಳಿಂದ ಕೊಲೆ ಆರೋಪಿ ರಕ್ಷಣೆ ಎಂದ ಜೆಡಿಎಸ್
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಪೂಜಾಗಾಂಧಿ ನೆತ್ತಿ ಮೇಲೆ ಬಹಿಷ್ಕಾರ ತೂಗು ಕತ್ತಿ
ನಟಿ ರಮ್ಯಾಗೆ ಒಂದು ವರ್ಷ ಬಹಿಷ್ಕಾರ ಹಾಕಿದ ಫಿಲಂ ಚೇಂಬರ್ ನಟಿ ಪೂಜಾಗಾಂಧಿ ಅವರ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಿದೆ. 'ನೀ ಇಲ್ಲದೆ' ನಿರ್ದೇಶಕ ಶಿವ ಗಣಪತಿ ಅವರನ್ನು ಬೇಷರತ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪೂಜಾಗಾಂಧಿ ಅವರಿಗೂ ಆರು ತಿಂಗಳು ಬಹಿಷ್ಕಾರ ಹಾಕುವುದಾಗಿ ನಿರ್ಮಾಪಕರ ಸಂಘ ಎಚ್ಚರಿಸಿದೆ.
'ನೀ ಇಲ್ಲದೆ' ಚಿತ್ರದ ಬಾಕಿ ಸಂಭಾವನೆ ರು.4 ಲಕ್ಷ ಕೊಟ್ಟಿಲ್ಲ ಎಂದು ಕಲಾವಿದರ ಸಂಘಕ್ಕೆ ದೂರು ನೀಡಿದ್ದರು ಪೂಜಾಗಾಂಧಿ. ಹಾಗೆಯೇ ಎ ಗಣೇಶ್ ಚಿತ್ರದಲ್ಲಿ ನಟಿಸಬಾರದು ಎಂದು ಹೇಳಿಕೆ ಕೊಟ್ಟಿದ್ದರು. ಇದು ತಪ್ಪು ಎಂದಿರುವ ನಿರ್ಮಾಪಕರ ಸಂಘ, ಪೂಜಾಗಾಂಧಿ ನಿರ್ಮಾಪಕರ ಬಳಿ ಕ್ಷಮೆ ಕೋರಬೇಕು ಎಂದು ಫರ್ಮಾನು ಹೊರಡಿಸಿದೆ.
ಒಂದು ವೇಳೆ ಪೂಜಾಗಾಂಧಿ ಅವರು ನಿರ್ಮಾಪಕ ಎ ಗಣೇಶ್ ಅವರನ್ನು ಕ್ಷಮೆ ಕೇಳಲಿಲ್ಲ ಎಂದರೆ ಅವರಿಗೂ ಆರು ತಿಂಗಳು ಬಹಿಷ್ಕಾರ ಹಾಕುವುದಾಗಿ ಸಂಘ ಎಚ್ಚರಿಕೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೂಜಾಗಾಂಧಿ, ಬಾಕಿ ಹಣ ಕೇಳುವುದು ತಪ್ಪೇ? ನನಗೆ ಕಲಾವಿದರ ಸಂಘದ ಬೆಂಬಲ ಇದೆ. ಅವರು ಏನು ಹೇಳುತ್ತಾರೋ ಅದರ ಪ್ರಕಾರ ಮುಂದಿನ ಹೆಜ್ಜೆ ಇಡುತ್ತೇನೆ ಎಂದಿದ್ದಾರೆ.
ಏತನ್ಮಧ್ಯೆ 'ನೀ ಇಲ್ಲದೆ' ಚಿತ್ರ ಮಾರ್ಚ್ 25ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಎಲ್ಲಿ ತೊಂದರೆಯಾಗುತ್ತದೋ, ಚಿತ್ರ ಬಿಡುಗಡೆಯನ್ನು ತಡೆಯದಂತೆ ನಿರ್ದೇಶಕ ಶಿವ ಗಣಪತಿ ಹೈಕೋರ್ಟ್ನಿಂದ ಕೇವಿಯಟ್ ತಂದಿದ್ದಾರೆ. ಪೂಜಾಗಾಂಧಿ ಜೊತೆ ಸವಾರಿ ಖ್ಯಾತಿಯ ರಘು ಮುಖರ್ಜಿ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.