Don't Miss!
- Finance ಗೋವಾ-ತಮ್ನಾರ್ ವಿದ್ಯುತ್ ಯೋಜನೆ ತಿರಸ್ಕರಿಸಿದ ಕರ್ನಾಟಕ
- Lifestyle ಇಲ್ಲಿದೆ ವಿಶ್ವದ ಅತ್ಯಂತ ದುಬಾರಿ ಹಸು..! ₹40 ಕೋಟಿಗೆ ಹರಾಜು..!
- News ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅನರ್ಹತೆ ಕೋರಿದ್ದ ಅರ್ಜಿ ವಜಾ
- Sports CSK vs GT: ಚೆಪಾಕ್ನಲ್ಲಿ ನಡೆಯದ 'ಶುಭ' ಆಟ; ಸಿಎಸ್ಕೆ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಟೈಟನ್ಸ್
- Automobiles ಆಕರ್ಷಕ ಬೆಲೆ: ಭಾರೀ ಬೇಡಿಕೆಯ ಕಿಯಾ ಸೆಲ್ಟೋಸ್ ಎಸ್ಯುವಿಯ ಹೊಸ ರೂಪಾಂತರಗಳು ಬಿಡುಗಡೆ
- Technology Lenovo: ಭಾರತದಲ್ಲಿ ಲೆನೊವೊ ಟ್ಯಾಬ್ M11 ಲಾಂಚ್! 8GB RAM ... ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಅಭಿನಯ, ಕುಟುಂಬಕ್ಕೆ ವಾರಂಟ್ ಜಾರಿ
ಚಲನಚಿತ್ರ ಹಾಗೂ ಕಿರುತೆರೆ ನಟಿ ಅಭಿನಯ ಮತ್ತು ಅವರ ಕುಟುಂಬದವರಿಗೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಎಂಟನೇ ಎಸಿಎಂಎಂ ನ್ಯಾಯಾಲಯ ಅಭಿನಯಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಮರುದಿನವೇ ಕೌಟುಂಬಿಕ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಅಭಿನಯ ಸಹೋದರ ಶ್ರೀನಿವಾಸ್ ಮತ್ತವರ ಪತ್ನಿ ಲಕ್ಷ್ಮಿದೇವಿ (ಪುಷ್ಪ)ಅವರ ನಡುವಿನ ವಿವಾಹ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಶ್ರೀನಿವಾಸನ ಪತ್ನಿ ಲಕ್ಷ್ಮಿದೇವಿ ಹಾಗೂ ಮಗುವಿಗೆ ಜೀವನಾಧಾರ ಭತ್ಯೆ ನೀಡುವಂತೆ ಕೌಟುಂಬಿಕ ನ್ಯಾಯಾಲಯ ಆದೇಶಿಸಿತ್ತು.
ಆದರೆ ನ್ಯಾಯಾಲಯದ ಆದೇಶವನ್ನು ಪಾಲಿಸದೆ ಕೇವಲ ರು.50 ಸಾವಿರ ನೀಡಿದ ಕಾರಣ ಶುಕ್ರವಾರ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ. ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದ ಲಕ್ಷ್ಮಿದೇವಿ 2005ರಲ್ಲಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು ತಿಂಗಳಿಗೆ ರು.2000 ಭತ್ಯೆ ನೀಡುವಂತೆ ಆದೇಶಿಸಿದ್ದರು. ತೀರ್ಪು ನೀಡಿದ ದಿನದಿಂದ ಇದುವರೆಗೂ ರು.1.25 ಲಕ್ಷ ನೀಡಬೇಕಿತ್ತು. ಆದರೆ ಬಾಕಿ ರು.75 ಸಾವಿರ ನೀಡದೆ ಇರುವ ಕಾರಣ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ.