Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಮಾಲಾ, ಶಬರಿಮಲೆ ವಿವಾದ ಅಧಿಕಾರಿ ಬಂಧನ
ತಿರುವನಂತಪುರಂ, ಜು. 23 : ನಟಿ ಜಯಮಾಲಾ ಅವರು ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಗುಲದ ಮಾಜಿ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ವಿ ಎಸ್ ರಾಜಗೋಪಾಲ್ ಅವರನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಕೊಟ್ಟಾಯಂ ನಲ್ಲಿ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಒಬ್ಬ ಜ್ಯೋತಿಷಿಯು ಸೇರಿದಂತೆ ಮೂವರು ವ್ಯಕ್ತಿಗಳ ಸಂಚಿನ ಫಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ದೇವಾಲಯಕ್ಕೆ ಸಂಬಂಧಿಸಿ ದೇವಪ್ರಶ್ನೆ ಕಾರ್ಯಕ್ರಮ ನಡೆಸಿದಾಗ ರಾಜಗೋಪಾಲ್ ಅವರು ಜಯಮಾಲಾ ಅವರ ಬೆಂಗಳೂರಿನ ನಿವಾಸಕ್ಕೆ ದೂರವಾಣಿ ಕರೆಮಾಡಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ದೇವಪ್ರಶ್ನೆ ವೇಳೆ ಮಹಿಳೆಯೊಬ್ಬರು ಗರ್ಭಗುಡಿ ಪ್ರವೇಶಿಸಿದ್ದರು ಎಂದು ಕಂಡುಬಂದಿತ್ತು.
ಶಬರಿಮಲೆ ದೇವಾಲಯದಲ್ಲಿ 10 ರಿಂದ 50 ವರ್ಷವರೆಗಿನ ಮಹಿಳೆಯರು ಗರ್ಭಗುಡಿ ಪ್ರವೇಶಿಸುವಂತಿಲ್ಲ. ಜನಜಂಗುಳಿಯ ವೇಳೆ ನನ್ನನ್ನು ಗರ್ಭಗುಡಿಯ ಒಳಗೆ ತಳ್ಳಲಾಗಿತ್ತು ಎಂದು ಜಯಮಾಲಾ ಆಡಳಿತ ಮಂಡಳಿಗೆ ಫ್ಯಾಕ್ಸ್ ಸಂದೇಶ ಕಳುಹಿಸಿದ್ದರು. ಜಯಮಾಲಾ ಅವರನ್ನು ಆರೋಪಿಯೆಂದು ಪೊಲೀಸರು ಪರಿಗಣಿಸದೆ ಕೇಸ್ ವಾಪಾಸ್ ಪಡೆದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)