Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಗರ ಘರ್ಜನೆಗೆ ಬಾಲ ಮುದುಡಿಕೊಂಡ ಸಿಂಗಂ
ಕಡೆಗೂ ಕೆಚ್ಚೆದೆಯ ಕನ್ನಡಿಗರ ಆಕ್ರೋಶಕ್ಕೆ ಮಣಿದು ಬಾಲ ಮುದುಡಿದ ನಾಯಿಯಂತಾಗಿದೆ 'ಸಿಂಗಂ'. ಚಿತ್ರದಲ್ಲಿನ ಕನ್ನಡಿಗರ ಬಗೆಗಿನ ಅವಹೇಳನಕಾರಿ ಸಂಭಾಷಣೆಗೆ ಕತ್ತರಿ ಹಾಕಲಾಗಿದೆ. ಚಿತ್ರದಲ್ಲಿನ ಆಕ್ಷೇಪಾರ್ಹ ಸಂಭಾಷಣೆಯನ್ನು ಮ್ಯೂಟ್ ಮಾಡಿದ ಬಳಿಕ 'ಸಿಂಗಂ' ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ರಾಜ್ಯದ ಉಳಿದ ಚಿತ್ರಮಂದಿರಗಳಲ್ಲೂ ಆಕ್ಷೇಪಾರ್ಹ ಸಂಭಾಷಣೆಗೆ ಕತ್ತರಿ ಹಾಕಬೇಕು. ಇಲ್ಲದಿದ್ದರೆ 'ಸಿಂಗಂ' ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ. ರಾಜ್ಯದ ಉಳಿದಜಿಲ್ಲೆಗಳಲ್ಲೂ ಕರವೇ ಕಾರ್ಯಕರ್ತರು 'ಸಿಂಗಂ' ಚಿತ್ರವನ್ನು ವೀಕ್ಷಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಿಂಗಂ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ತಕ್ಷಣವೆ ಕ್ಷಮೆ ಯಾಚಿಸಿದೆ. ಕನ್ನಡಿಗರನ್ನು ನೋಯಿಸುವ ಉದ್ದೇಶ ಖಂಡಿತ ನಮಗಿಲ್ಲ. ಚಿತ್ರದಲ್ಲಿನ ಆಕ್ಷೇಪಾರ್ಹ ಸಂಭಾಷಣೆಗಳನ್ನು ತಕ್ಷಣ ಅಳಿಸಿಹಾಕುತ್ತೇವೆ. ವಿವಾದಾತ್ಮಕ ಸಂಭಾಷಣೆಗಳನ್ನು ಮ್ಯೂಟ್ ಮಾಡಿಸುತ್ತೇವೆ. ಶನಿವಾರದಿಂದ ನೆಗಟೀವ್ ಪ್ರದರ್ಶನದಲ್ಲಿ ಬದಲಾವಣೆಗಳಾಗುತ್ತವೆ ಎಂದಿದ್ದಾರೆ ರಿಲಯನ್ಸ್ ಸಮೂಹದ ಹಿರಿಯ ಉಪಾಧ್ಯಕ್ಷ ಎಸ್ ನರಸಿಂಹನ್ ಹಾಗೂ ವಕ್ತಾರ ಪ್ರಶಾಂತ್ ನಂಬರ್ಗಿ. (ದಟ್ಸ್ಕನ್ನಡ ಸಿನಿವಾರ್ತೆ)