Don't Miss!
- Automobiles 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೌದೆ? ನಾಗಾಭರಣ ಅಷ್ಟು ಡಿಮ್ಯಾಂಡ್ ಮಾಡಿದ್ರಾ
ಕರ್ನಾಟಕ ಚಲನಚಿತ್ರ ಇತಿಹಾಸದಲ್ಲೇ ಅಭೂತಪೂರ್ವ ಚಿತ್ರ ನಿರ್ಮಿಸಿ ಚಿತ್ರರಂಗದಲ್ಲಿ ಮತ್ತೆ ಮೆರೆಯಬೇಕೆಂಬ ರಾಜಕಾರಣಿ ಕಮ್ ನಟ ಕು ಮಾರ್ ಬಂಗಾರಪ್ಪ ಅವರ ಚಿನ್ನದಂಥ ಆಸೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಬಲ್ಲ ಮೂಲಗಳ ಪ್ರಕಾರ ಚಿತ್ರದ ಅಂದಾಜು ವೆಚ್ಚ ಕೋಟಿ ಕೋಟಿಗಳನ್ನು ದಾಟುತ್ತಿದ್ದು, ತನಗೂ ಒಂದಿಷ್ಟು ಕೋಟಿ ಕೊಡಿ ಎಂದು ನಿರ್ದೇಶಕ ಟಿಎಸ್ ನಾಗಾಭರಣ ಬೇಡಿಕೆ ಇಟ್ಟಿದ್ದಾರಂತೆ.
ರೇಣುಕಾಂಬ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಕೆಳದಿ ಶಿವಪ್ಪನಾಯಕ ಚಿತ್ರಕ್ಕೆ ಚಾರಿತ್ರಿಕ ಚಿತ್ರಗಳನ್ನು ನಿರ್ದೇಶಿಸುವುದರಲ್ಲಿ ಸಿದ್ಧಹಸ್ತರಾದ ಟಿಎಸ್ ನಾಗಾಭರಣರೇ ಸರಿ ಎಂದು ನಿರ್ಧರಿಸಿ ಮಾತುಕತೆ ನಡೆಸಿದ್ದ ಕುಮಾರ್ ಈಗ ಮುಂದೇನು ಎಂದು ಚಿಂತಿಸುತ್ತಿದ್ದಾರೆ.ಆದರೆ, ಚಿಂತೆಗೋ, ಸಿಟ್ಟಿಗೊ ತಮ್ಮ ತಲೆಗೂದಲನ್ನು ಕಿತ್ತುಕೊಳ್ಳುವಂತಿಲ್ಲ!. ಕಾರಣ ಶಿವಪ್ಪನಾಯಕನಾಗಿ ಮೆರಯಬೇಕಾಗಿರುವ ಕುಮಾರ್ ಗೆ ಉದ್ದುದ್ದಾ ತಲೆಗೂದಲು ಅನಿವಾರ್ಯ.
ಇಷ್ಟಕ್ಕೂ ನಾಗಾಭರಣ ಕೇಳಿದ್ದರಲ್ಲಿ ತಪ್ಪಿಲ್ಲ ಎನ್ನುತ್ತಿದೆ ಒಂದು ಗುಂಪು. ಚಿತ್ರದ ಬಜೆಟ್ ಎರಡಂಕಿಯನ್ನು ಮೀರಿ ದಾಟಿದಾಗ, ನಿರ್ದೇಶಕನಿಗೆ ಐದಾರು ಕೋಟಿ ಪ್ಯಾಕೇಜ್ ಆದ್ರೂ ಬೇಡ್ವಾ. ಅದೂ ಇಂಡಸ್ಟ್ರಿಯಲ್ಲಿ ಸೀನಿಯರ್ ಡೈರೆಕ್ಟರ್ ಬೇರೆ ಎಂದು ಚರ್ಚೆ ಸಾಗುತ್ತಲೇ ಇದೆ.
ಕುಮಾರ್ ಬಂಗಾರಪ್ಪ ಬಳಗದ ಚಿಂತೆ ಅದಲ್ಲ, ನಾಗಾಭರಣರಿಗೆ ಒಂದಿಷ್ಟು ಹೆಚ್ಚಿಗೆ ಕೊಡೊದಕ್ಕೆ ಏನು ಕಷ್ಟವಿಲ್ಲ. ಆದ್ರೆ ಚಿತ್ರದಲ್ಲಿ ಮೂರು ಜನ ಲಲನಾಮಣಿಗಳು ನಾಯಕಿಯರಾಗಿ ನರ್ತನ ಮಾಡಲಿದ್ದಾರೆ. ಮುಂದೆ, ಸಂಭಾವನೆ ಕಮ್ಮಿಯಾಯಿತು ಎಂದು ತಾಂಡವ ನೃತ್ಯ ಮಾಡಿದರೆ ಏನು ಮಾಡೋದು ಎಂದು ಚಿಂತಿಸತೊಡಗಿದ್ದಾರೆ.
ಎಲ್ಲಕ್ಕೂ ಉತ್ತಮ ಪರಿಹಾರವೆಂದರೆ, ನಾಗಾಭರಣರನ್ನು ಬದಲಿಸಿ ಮತ್ತೊಬ್ಬರನ್ನು ಕಡಿಮೆ ಮೊತ್ತಕ್ಕೆ ಕುದುರಿಸುವುದು. ಆ ಕೆಲಸವೂ ತೆರೆಮರೆಯಲ್ಲಿ ನಡೆದಿದೆಯಂತೆ. ಪುಷ್ಪಕವಿಮಾನ ಖ್ಯಾತಿಯ ಸಿಂಗೀತಂ ಶ್ರೀನಿವಾಸ್ ಅವರನ್ನು ಕರೆತಂದು ಮಲೆನಾಡಿನ ವೀರಯೋಧ ಶಿವಪ್ಪ ನಾಯಕನಿಗೆ ಆಕ್ಷನ್ ಕಟ್ ಹೇಳಿಸುವ ಯೋಜನೆಯಲ್ಲಿದೆ ಕುಮಾರ್ ಬಳಗ. ಯಾವುದಕ್ಕೂ ಕಾದು ನೋಡೋಣ.