Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋವಾದಿಂದ ಸರೋಜಾ ದೇವಿ ಹಠಾತ್ ವಾಪಸ್
ಆದರೆ ಈ ಸುದ್ದಿಯನ್ನು ಸರೋಜಾ ದೇವಿ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತಮಗೆ ಬಿಡುವಿಲ್ಲದ ಕಾರಣ ಬೆಂಗಳೂರಿಗೆ ಮರಳಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. 'ನಾನು ಶನಿವಾರ ಉದ್ಘಾಟನಾ ಸಮಾರಂಭಕ್ಕೆ ಬಂದೆ. ರಾತ್ರಿ ಹೋಟೆಲ್ ನಲ್ಲಿ ಇಳಿದುಕೊಂಡಿದ್ದೆ. 26ನೇ ತಾರೀಖಿನ ವರೆಗೆ ಇರುವಂತೆ ಸೂಚಿಸಿದರು. ಆದರೆ ಅಷ್ಟು ದಿನ ಇರಲು ಸಾಧ್ಯವಿಲ್ಲ ಎಂದು ಇಂದೇ ವಾಪಸ್ಸಾದೆ' ಎಂದು ಹೇಳಿರುವುದಾಗಿ 'ಪ್ರಜಾವಾಣಿ' ಪತ್ರಿಕೆ ಪ್ರಕಟಿಸಿದೆ.
ಆದರೆ, ಪಂಚತಾರಾ ಹೋಟೆಲ್ ನಲ್ಲಿ ಸರೋಜಾದೇವಿ ಅವರು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ವ್ಯವಸ್ಥೆಗಳು ಸರಿಇಲ್ಲದ ಕಾರಣಕ್ಕೆ ಅವರು ಬೇಸರಗೊಂಡು ಬೆಂಗಳೂರಿಗೆ ವಾಪಸ್ಸಾದರು ಎನ್ನುತ್ತಾರೆ ಆಯೋಜಕರು. ತಮ್ಮ ಕಿವಿಗೂ ಈ ವಿಚಾರ ಬಿದ್ದಿರುವುದಾಗಿ ಚಿತ್ರೋತ್ಸವ ನಿರ್ದೇಶನಾಲಯದ ನಿರ್ದೇಶಕ ಎಸ್.ಎಂ.ಖಾನ್ ಅವರು ಸ್ಪಷ್ಟಪಡಿಸಿದ್ದಾರೆ.
ಇಲ್ಲಿನವರ ವರ್ತನೆಯಲ್ಲಿ ಆರ್ಯರು, ದ್ರಾವಿಡರು ಎಂಬ ಭೇದ ಭಾವ ಇದೆ. ಇದು ತಮ್ಮ ಗಮನಕ್ಕೂ ಬಂದಿರುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಜಯಮಾಲಾ ಹೇಳುತ್ತಾರೆ. ಚಲನಚಿತ್ರೋತ್ಸವಕ್ಕೆ ಅತಿಥಿಗಳಾಗಿ ಕರೆದಿರುವ ಎಲ್ಲರಿಗೂ ವಿಮಾನದ ಟಿಕೆಟ್, ಉಳಿದುಕೊಳ್ಳಲು ಸ್ಥಳ ಹಾಗೂ ಚಿತ್ರಗಳನ್ನು ನೋಡಲು ಟಿಕೆಟ್ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದೂ ಸರೋಜಾ ದೇವಿ ಮಾತ್ರ ಒಂದೇ ದಿನದಲ್ಲಿ ಹಿಂದಿರುಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚಲನ ಚಿತ್ರೋತ್ಸವದಲ್ಲಿ ಸರೋಜಾ ದೇವಿ ಅವರ'ಬಬ್ರುವಾಹನ' ಸೇರಿದಂತೆ ಮೂರು ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)