Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಸಮಾಧಿಗೆ ಗೃಹ ಸಚಿವ ಅಶೋಕ್ ಅಗೌರವ
ಡಾ.ರಾಜ್ ಕುಮಾರ್ ಅವರ 84ನೇ ಹುಟ್ಟುಹಬ್ಬ ಸಂದರ್ಭದಲ್ಲಿ ಮಂಗಳವಾರ (ಏ.24) ಅಹಿತಕರ ಘಟನೆಯೊಂದು ನಡೆದಿದೆ. ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಯನ್ನು ಗೃಹ ಮತ್ತು ಸಾರಿಗೆ ಸಚಿವ ಆರ್ ಅಶೋಕ್ ಹತ್ತಿ ನಿಂತು ಅಗೌರವ ತೋರಿದ್ದಾರೆ ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಕಿಡಿಕಾರಿದ್ದಾರೆ.
ರಾಜ್ ಸಮಾಧಿಗೆ ಮಾಲಾರ್ಪಣೆ ಮಾಡಿ ನುಡಿನಮನ ಸಲ್ಲಿಸುವ ವೇಳೆ ಗೃಹ ಸಚಿವರು ರಾಜ್ ಸಮಾಧಿಯ ಮೇಲೆ ಕಾಲಿಟ್ಟು ಮಾಲಾರ್ಪಣೆ ಮಾಡುತ್ತಿರುವ ವಿಡಿಯೋವನ್ನು ಸುವರ್ಣ ವಾಹಿನಿ ತನ್ನ ಮಧ್ಯಾಹ್ನದ ವಾರ್ತಾ ಸಂಚಿಕೆಯಲ್ಲಿ ಬಿತ್ತರಿಸಿದೆ. ಅಶೋಕ್ ನಡವಳಿಕೆ ಬಗ್ಗೆ ಬರಗೂರು ರಾಮಚಂದ್ರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
"ಒಬ್ಬ ಸಾಮಾನ್ಯ ವ್ಯಕ್ತಿಯೊಬ್ಬ ಅಷ್ಟೊಂದು ಎತ್ತರಕ್ಕೆ ಏರಬಹುದು ಎಂದು ತೋರಿಸಿಕೊಟ್ಟಂತಹ ಮಹಾನ್ ಚೇತನ ರಾಜ್ ಕುಮಾರ್. ಅವರ ಸಮಾಧಿ ಮೇಲೆ ಕಾಲಿಟ್ಟು ಫೋಟೋ ತೆಗೆಸಿಕೊಂಡಿದ್ದು ನಿಜಕ್ಕೂ ಖಂಡನೀಯ ಎಂದು ಕಿಡಿಕಾರಿದರು.
ಈ ಸ್ಥಳವನ್ನು ನಾವು ದೇವಸ್ಥಾನ ಎಂದೇ ಭಾವಿಸುತ್ತೇವೆ. ಅಂತಹ ಪವಿತ್ರ ಸ್ಥಳಕ್ಕೆ ಮಾನ್ಯ ಗೃಹಸಚಿವರು ಅಗೌರವ ಸೂಚಿಸಿರುವುದು ನಿಜಕ್ಕೂ ಬೇಸರದ ಸಂಗತಿ. ಇದು ರಾಜ್ ಅವರಿಗೆ ಮಾಡಿದ ಅವಮಾನ. ಈ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾಗಿ ಬರಗೂರು ತಿಳಿಸಿದ್ದಾರೆ. (ಏಜೆನ್ಸೀಸ್)