Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರದರ್ಶಕರ ಜಯ: ಬಸಂತ್, ರಾಜೇಂದ್ರಸಿಂಗ್ಬಾಬು ಕ್ಷಮಾಪಣೆ
ಹುಬ್ಬಳ್ಳಿ : ಪ್ರದರ್ಶಕರಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕರ ಸಂಘದ ಅಧ್ಯಕ್ಷ ಬಸಂತ್ ಕುಮಾರ್ಪಾಟೀಲ್ ಬೇಷರತ್ ಕ್ಷಮೆ ಕೇಳಿದ್ದಾರೆ. ಹೀಗಾಗಿ ಪ್ರದರ್ಶಕರು ಉತ್ತರ ಕರ್ನಾಟಕದಲ್ಲಿ ಕಾಂಚನ ಗಂಗಾ ಚಿತ್ರದ ಪ್ರದರ್ಶನಕ್ಕೆ ಸಮ್ಮತಿಸಿದ್ದಾರೆ.
ಮುಖ್ಯಮಂತ್ರಿ ಧರ್ಮಸಿಂಗ್ ನಿರ್ದೇಶನದ ಮೇಲೆ ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಕ್ಷಮೆ ಕೇಳಲಾಯಿತು. ಚಿತ್ರೋದ್ಯಮದ ಚಳವಳಿ ದಿನಗಳಲ್ಲಿ ಪ್ರದರ್ಶಕರ ನೀತಿಯನ್ನು ಟೀಕಿಸಲಾಗಿತ್ತು. ಚಿತ್ರಮಂದಿರದ ಮಾಲೀಕರನ್ನು ತೆರಿಗೆ ಕಳ್ಳರು, ಕನ್ನಡ ದ್ರೋಹಿಗಳೆಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಶಿವರಾಜ್ಕುಮಾರ್ ಅಭಿನಯದ ಕಾಂಚನ ಗಂಗಾ ಚಿತ್ರಕ್ಕೆ ಪ್ರದರ್ಶಕರ ಮಹಾ ಮಂಡಳಿ ಬಹಿಷ್ಕಾರ ಹಾಕಿತ್ತು. ಸಂಧಾನದ ಮೂಲಕ ಸಮಸ್ಯೆ ತಣ್ಣಗಾಗಿದೆ. ಡಿ.25ರಂದು ಹುಬ್ಬಳ್ಳಿ, ಗದಗ, ಧಾರವಾಡ, ರಾಣಿಬೆನ್ನೂರಿನಲ್ಲಿ ಕಾಂಚನ ಗಂಗಾ ಪ್ರದರ್ಶನಕ್ಕೆ ಸಜ್ಜಾಗಿದೆ.
ಬಾಬು ಸಿಟ್ಟು : ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು, ಓದುಗೌಡರ್ ಯಾರೆಂದು ನನಗೆ ಗೊತ್ತಿರಲಿಲ್ಲ. ಅವರನ್ನು ನೋಡಿದ್ದು ಇಲ್ಲಿಯೇ. ಉದ್ಯಮದ ಹಿತದೃಷ್ಟಿಯಿಂದ ಕ್ಷಮೆ ಕೇಳಿದ್ದೇನೆ. ಇಂತಹ ಪರಿಸ್ಥಿತಿ ಮುಂದುವೆರೆದರೆ, ಉತ್ತರ ಕರ್ನಾಟಕಕ್ಕೆ ಕನ್ನಡ ಚಿತ್ರಗಳು ಬಿಡುಗಡೆಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದು ಗುಡುಗಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್