Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವ್ಯಭಿಚಾರ ಸಾಬೀತುಪಡಿಸಿದರೆ ಕೋಟಿ ರು. ಕೊಡುತ್ತೇನೆ
ವೇಶ್ಯಾವಾಟಿಕೆ ಜಾಲದಲ್ಲಿ ಹೈದರಾಬಾದ್ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿನಿಮಾ ತಾರೆಗಳಾದ ಸಾಯಿರಾ ಬಾನು[ಗ್ಯಾಲರಿ], ಜ್ಯೋತಿ[ಗ್ಯಾಲರಿ] ಹೊಸ ಸವಾಲು ಎಸೆದಿದ್ದಾರೆ. ತಾವು ವ್ಯಭಿಚಾರ ಮಾಡಿದ್ದನ್ನು ಸಾಬೀತುಪಡಿಸಿದರೆ ಅವರು ಯಾರೇ ಆಗಲಿ ಅವರಿಗೆ ಒಂದು ಕೋಟಿ ರುಪಾಯಿ ಬಹುಮಾನವಾಗಿ ನೀಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಈ ಜಾಲಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಯಾರೋ ಮಾಡಿದ ತಪ್ಪನ್ನು ತಮ್ಮ ತಲೆಗೆ ಕಟ್ಟಿದ್ದಾರೆ ಎಂದು ಸಾಯಿರಾ ಬಾನು ನ್ಯಾಯಾಲಯಕ್ಕೆ ತಿಳಿಸಿದ್ದರು. ಹಾಗಾಗಿ ನ್ಯಾಯಾಲಯ ಆಕೆಯನ್ನು ಷರತ್ತುಬದ್ಧ ಜಾಮೀನ ಮೇಲೆ ಬಿಡುಗಡೆ ಮಾಡಿತ್ತು.
ವೇಶ್ಯಾವಾಟಿಕೆ ಜಾಲದಲ್ಲಿ ತಮ್ಮನ್ನು ಸಿಲುಕಿಸಿದ್ದಾರೆ ಎಂದು ಆರೋಪಿಸಿರುವ ಸಾಯಿರಾಬಾನು ತಮ್ಮದೇನು ತಪ್ಪಿಲ್ಲ ಎಂದಿದ್ದಾರೆ. ಆದರೆ ಹೈದರಾಬಾದ್ ಪೊಲೀಸರು ಹೇಳುವ ಕತೆ ಕೊಂಚ ಭಿನ್ನವಾಗಿದೆ. ಸಿನಿ ತಾರೆಯರಾದ ಜ್ಯೋತಿ, ಸಾಯಿರಾ ಬಾನು ಅವರು ವೇಶ್ಯಾವೃತ್ತಿಯಲ್ಲಿ ತೊಡಗಿದ್ದಾಗ ಸ್ಥಳದಲ್ಲೆ ಅವರನ್ನು ಬಂಧಿಸಿದ್ದೇವೆ ಎಂದಿದ್ದಾರೆ.
ಹೈದರಾಬಾದ್ ನಗರ ಪೊಲೀಸ್ ಕಮೀಷನರ್ ಎ ಕೆ ಖಾನ್ ಮಾತನಾಡುತ್ತಾ, ಚಿತ್ರರಂಗವನ್ನು ಪೊಲೀಸರು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಚಿತ್ರೋದ್ಯಮಕ್ಕೆ ಸಂಬಂಧಿಸಿದ ಕೆಲವರು ಮಾದಕ ದ್ರವ್ಯ ಮತ್ತು ಸೆಕ್ಸ್ ಜಾಲದಲ್ಲಿ ಸಿಕ್ಕಿಬಿದ್ದ ಮಾತ್ರಕ್ಕೆ ಇಡೀ ಚಿತ್ರೋದ್ಯಮಕ್ಕೆ ಕೆಟ್ಟ ಹೆಸರು ಬರುವುದಿಲ್ಲ.
ಮಾದಕದ್ರವ್ಯ ಜಾಲ ಭೇದಿಸಿದಾಗ ವೇಶ್ಯಾವಾಟಿಕೆ ಜಾಲವೂ ಬಯಲಾಯಿತು. ಈ ಎರಡು ಜಾಲಗಳಲ್ಲಿ ಸಾಯಿರಾ ಬಾನುಗೆ ಸಂಬಂಧವಿದೆ ಎಂದು ಎ ಕೆ ಖಾನ್ ಸ್ಪಷ್ಟಪಡಿಸಿದ್ದಾರೆ. ಕಳ್ಳರ ಜೊತೆ ವಾಸಿಸುವವರನ್ನು ಕಳ್ಳ ಅಲ್ಲ ಎಂದರೆ ಯಾರು ತಾನೇ ನಂಬುತ್ತಾರೆ ಹೇಳಿ? ಎಂಬುದು ಹೈದರಾಬಾದ್ ಪೊಲೀಸರ ವಾದ.