Don't Miss!
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾದೇಶನಿಗೆ ಸೆನ್ಸಾರ್ ನಿಂದ ಕೊನೆಗೂ ಮುಕ್ತಿ
ಅಂತೂ ಇಂತೂ ರವಿಶ್ರೀವತ್ಸ ಬಳಗದ ಹೋರಾಟಕ್ಕೆ ಜಯ ಸಿಕ್ಕಿದೆ. ಶಿವರಾಜ್ ಕುಮಾರ್ ಅಭಿನಯದ ಮಾದೇಶ ಚಿತ್ರಕ್ಕೆ ಪರಿಷ್ಕೃತ 'ಎ' ಪ್ರಮಾಣ ಪತ್ರ ನೀಡಿ, ವಿವಾದಕ್ಕೆ ಅಂತ್ಯ ಹಾಡಿದೆ. ಸೆನ್ಸಾರ್ ಮಂಡಳಿ ನೀಡಿದ್ದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ ಮಾದೇಶ ತಂಡ ಬಹಳಷ್ಟು ಕತ್ತರಿ ಪ್ರಯೋಗ ನಡೆಸಿ, ಸೆನ್ಸಾರ್ ಮಂಡಳಿಗೆ ಪುನಃ ಚಿತ್ರ ತೋರಿಸಿ ಒಪ್ಪಿಗೆ ಪಡೆದಿದೆ.
ಕಳೆದ ವಾರ ಮಾದೇಶ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ, 'ಈ ಚಿತ್ರ ಯಾವುದೇ ವರ್ಗದ ಜನರು ನೋಡಲು ಯೋಗ್ಯವಾಗಿಲ್ಲ ಎಂದು ಹೇಳಿ ಪ್ರಮಾಣ ಪತ್ರ ನೀಡದೆ ಇಡೀ ಚಿತ್ರವನ್ನು ತಿರಸ್ಕರಿಸಿತ್ತು. ಈಗ ಪುನಃ ಸಂಕಲನಗೊಂಡ ಮೇಲೆ ಚಿತ್ರ ಸೆನ್ಸಾರ್ ಮಂಡಳಿಯ ನಿಯಮಕ್ಕೆ ಅನುಗುಣವಾಗಿದೆ. ಆದರೆ ಶೇ. 100 ರಷ್ಟು ಚಿತ್ರ ತೃಪ್ತಿ ತಂದಿಲ್ಲ ಎಂದು ಪ್ರಾದೇಶಿಕ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.
ಸೆನ್ಸಾರ್ ಮಂಡಳಿಯಿಂದ ಕೊನೆಗೂ ಪ್ರಮಾಣ ಪತ್ರ ಗಳಿಸುವಲ್ಲಿ ಸಫಲರಾದ ಚಿತ್ರದ ನಿರ್ಮಾಪಕ ಗೋವರ್ಧನ್ ಮೂರ್ತಿ ಅವರು, ಚಿತ್ರವನ್ನು ರಾಜ್ಯಾದ್ಯಂತ ಆಗಸ್ಟ್ 25 ರಂದು ಬಿಡುಗಡೆ ಮಾಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
(ದಟ್ಸ್ ಕನ್ನಡಸಿನಿವಾರ್ತೆ)
ಮಾದೇಶನಿಗೆ ಸೆನ್ಸಾರ್ ಮಂಗಳಾರತಿ