Don't Miss!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- News ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರ: ಡಿ ಕೆ ಸುರೇಶ್ ಹೇಳಿದ್ದೇನು?
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋವಾ ಚಿತ್ರೋತ್ಸವ : ಅವರಿಗೆ ಸನ್ಮಾನ ನಮಗೆ ಅವಮಾನ
ಬೆಂಗಳೂರು : ಗೋವಾದ ಪಣಜಿಯಲ್ಲಿ ನಡೆಯುತ್ತಿರುವ 36ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ಕನ್ನಡಕ್ಕೆ ಅವಮಾನವೆಸಗಲಾಗಿದೆ ಎಂದು ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯಮಂಡಳಿ ದೂರಿದೆ.
ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶಿಸಲಾದ ಸಾಕ್ಷ್ಯಚಿತ್ರ ವಿವಾದಕ್ಕೆ ಕಾರಣವಾಗಿದೆ. ಸಾಕ್ಷ್ಯಚಿತ್ರದಲ್ಲಿ ತಮಿಳಿನ ಶಿವಾಜಿ ಗಣೇಶನ್, ಎಂಜಿಆರ್, ತೆಲುಗಿನ ಅಕ್ಕಿನೇನಿ ನಾಗೇಶ್ವರರಾವ್, ಎನ್ಟಿಆರ್, ಚಿರಂಜೀವಿ ಮತ್ತಿತರ ನಟರಿಗೆ ಸಂಬಂಧಿಸಿದಂತೆ ಚಿತ್ರ ತುಣುಕುಗಳನ್ನು ಪ್ರಸಾರ ಮಾಡಲಾಯಿತು. ಆದರೆ ಕನ್ನಡ ಚಿತ್ರರಂಗದ ಡಾ.ರಾಜ್ಕುಮಾರ್ , ವಿಷ್ಣುವರ್ಧನ್ ಬಗ್ಗೆ ಚಕಾರವಿರಲಿಲ್ಲ.
ಈ ಚಿತ್ರೋತ್ಸವದಲ್ಲಿ ನಾಡಿನ ಹೆಮ್ಮೆಯ ನಟಿ ತಾರಾ ಪಾಲ್ಗೊಳ್ಳುವ ಸಂಗತಿ ಕನ್ನಡಿಗರಿಗೆ ಹೆಮ್ಮೆ ತಂದಿತ್ತು. ಆದರೆ ಅಲ್ಲಿ ಕನ್ನಡಕ್ಕೆ ಮತ್ತೊಂದು ರೀತಿಯ ಅವಮಾನವಾಗಿದೆ ಎಂದು ಮಂಡಳಿ ದೂರಿದೆ.
ಈ ಸಂಬಂಧ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ಮಂಡಳಿ ಅಧ್ಯಕ್ಷ ಎಚ್.ಡಿ.ಗಂಗರಾಜ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್