Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯ, ರಕ್ಷಿತಾ, ಪಾರ್ವತಮ್ಮ ಬಂಧನಕ್ಕೆ ವಾರೆಂಟ್
ನಿರ್ಮಾಪಕರು ಮಾಡಿದ ಸಣ್ಣ ತಪ್ಪಿಗೆ ಖ್ಯಾತ ತಾರೆ ರಮ್ಯ ಅಲಿಯಾಸ್ ದಿವ್ಯ ಸ್ಪಂದನ, ಮಾಜಿ ತಾರೆ, ಹಾಲಿ ರಾಜಕಾರಣಿ ರಕ್ಷಿತಾ ಹಾಗೂ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರು ಬಂಧನ ಭೀತಿ ಎದುರಿಸುವಂತಾಗಿದೆ.
ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯ, ರಕ್ಷಿತ ಹಾಗೂ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ಅಮರ್ ಚಂದ್ ಜೈನ್ , ಶಂಕ್ರೇಗೌಡ ಹಾಗೂ ಎಂಎಚ್ ಸುನೀಲ್ ಬಂಧನ ಭೀತಿ ಎದುರಿಸುತ್ತಿದ್ದಾರೆ.
2011 ರ ನವೆಂಬರ್ ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಗರದ ಗೋಡೆಗಳ ಮೇಲೆ ಅಂದ ಹಾಳುಮಾಡುವ ಸಿನಿಮಾ ಪೋಸ್ಟರ್ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಇದಕ್ಕೆ ಸಿನಿಮಾ ಮಂದಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಆದರೆ,
ಈಗ
ಈ
ಬಗ್ಗೆ
ಪ್ರತಿಕ್ರಿಯಿಸಿರುವ
ನಟಿ
ರಮ್ಯಾ@divyaspandana
How
am
I
responsible
for
posters
being
pasted
without
permission?Neither
am
I
the
producer
or
the
person
who
pasted
them!!Verification..
ಎಂದು
ಟ್ವೀಟ್
ಮಾಡಿ
ಉತ್ತರಿಸಿದ್ದಾರೆ.
ದೂರು ದಾಖಲಿಸುವ ವೇಳೆ ಉಪ್ಪಾರಪೇಟೆ ಪೊಲೀಸರು ಸಿನಿಮಾ ಪೋಸ್ಟರ್ ಗಳನ್ನು ಸಹ ದಾಖಲೆಯಾಗಿ ಸಲ್ಲಿಸಿದ್ದರು. ಈ ವೇಳೆ ಜೋಗಯ್ಯ, ಖದೀಮರು, ಸಂಜು ವೆಡ್ಸ್ ಗೀತಾ, ಕೆಂಪೇಗೌಡ ಹಾಗೂ ಹುಡುಗರು ಸಿನಿಮಾದ ಪೋಸ್ಟರ್ ಗಳೇ ನ್ಯಾಯಾಲಯಕ್ಕೆ ಸಲ್ಲಿಕೆಯಾದ ದಾಖಲೆ.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾ. ರುಡೋಲ್ಫ್ ಪೆರೀರಾ, ಈ ಎಲ್ಲರಿಗೂ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.