Just In
- 7 min ago
ಪ್ರಶಾಂತ್ ನೀಲ್ 'ಸಲಾರ್' ಸಿನಿಮಾಗೆ ನಾಯಕಿ ಫಿಕ್ಸ್; ಪ್ರಭಾಸ್ ಜೊತೆ ಶ್ರುತಿ ಹಾಸನ್ ರೊಮ್ಯಾನ್ಸ್
- 8 min ago
ಆರ್ಆರ್ಆರ್, ಅಣ್ಣಾತ್ತೆ ಬಳಿಕ ಪುಷ್ಪ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆ
- 1 hr ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 3 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
Don't Miss!
- Sports
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಇಂದು ಮತ್ತೊಂದು ಚಿಕಿತ್ಸೆ
- News
ನಾಗರಹೊಳೆಯಲ್ಲಿ ಆರು ಹೊಸ ಜಾತಿಯ ಪಕ್ಷಿಗಳು ಪತ್ತೆ
- Automobiles
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಟಾಟಾ ನೆಕ್ಸಾನ್ ಇವಿ
- Finance
ಗರಿಷ್ಠ ಮಟ್ಟದಿಂದ 7500 ರು. ದೂರದಲ್ಲಿರುವ ಚಿನ್ನದ ಬೆಲೆ ಸತತ 5ನೇ ದಿನ ಇಳಿಕೆ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಲಾ ಕಿ ಜವಾನಿ ಐಟಂ ಹಾಡಿಗೆ ಹಾಡುಹಗಲೆ ಒಬ್ಬ ಬಲಿ
ಕತ್ರಿನಾ ಕೈಫ್ ಮಾದಕ ನೃತ್ಯದ 'ತೀಸ್ ಮಾರ್ ಖಾನ್' ಚಿತ್ರದ "ಶೀಲಾ ಕಿ ಜವಾನಿ" ಐಟಂ ಹಾಡು ಮುಂಬೈನಲ್ಲಿ ಒಬ್ಬನನ್ನು ಹಾಡುಹಗಲೆ ಬಲಿತೆಗೆದುಕೊಂಡಿದೆ. ಈ ಘಟನೆ ಸೋಮವಾರ (ಜ.24) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಹಾಡನ್ನು ನಿಷೇಧಿಸುವಂತೆ ಈ ಹಿಂದೆ ಒತ್ತಾಯ ಹೇರಲಾಗಿತ್ತು.
ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮದ್ಯದ ಅಮಲಿನಲ್ಲಿ ತೂರಾಡುತ್ತಿದ್ದ ಯುವಕರ ಗುಂಪೊಂದು ಈ ಹಾಡು ಹಾಡುತ್ತಾ ಮಹಿಳೆಯೊಬ್ಬರನ್ನು ಚುಡಾಯಿಸಿದೆ. ಈ ಸಂಬಂಧ ಆಕೆ ನೆರೆಹೊರೆಯವ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ನೆರೆಹೊರೆಯವರು ಯುವಕರ ಮೇಲೆ ಮುಗಿಬಿದ್ದಿದ್ದಾರೆ.
ಆಗ ನಡೆದ ಮಾರಾಮಾರಿಯಲ್ಲಿ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮಾರಾಮಾರಿಯಲ್ಲಿ 450ಕ್ಕೂ ಹೆಚ್ಚು ಜನ ಇದ್ದರು. ಈ ಸಂದರ್ಭದಲ್ಲಿ ಮಹಿಳೆಯ ಕಡೆಯಿಂದ ಬಂದಿದ್ದ ಜುಬೇರ್ ಮನ್ಸೂರಿ ಎಂಬುವವರಿಗೆ ತೀವ್ರ ಗಾಯಗಳಾಗಿ ಮೃತಪಟ್ಟಿದ್ದಾರೆ.
ಬಿದಿರಿನ ಕಟ್ಟಿಗೆ, ಕಬ್ಬಿಣದ ಸರಳು ಹಾಗೂ ಮಚ್ಚುಗಳ ಅಬ್ಬರ ನಡುವೆ ಸಿನಿಮೀಯ ರೀತಿಯಲ್ಲಿ ಎರಡೂ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸಜಿ ಖುರೇಷಿ ಹಾಗೂ ಅಮ್ಜಾದ್ ಶೇಖ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ 10 ಮಂದಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. [ಕತ್ರಿನಾ ಕೈಫ್]